25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

ಮೇಲಂತಬೆಟ್ಟು : ಸೆ.10ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ರವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಪ್ರಥಮ ಸುತ್ತಿನ ಗ್ರಾಮಸಭೆಯು ಕೊರಂ ಕೊರತೆಯಿಂದಾಗಿ ಮುಂದೂಡಲಾಗಿದೆ.

ಗ್ರಾಮಸ್ಥರಾದ ರಾಜೇಶ್ ಭಟ್ ಮಾತನಾಡಿ ಮೂರು ವಾರ್ಡ್ ಗಳ ಗ್ರಾಮಸ್ಥರನ್ನು ತಾಳೆ ಮಾಡಿ ನೋಡಿದಾಗ ಸಭೆಗೆ ಹಾಜರಾದ ಗ್ರಾಮಸ್ಥ ಸಂಖ್ಯೆ ಕಡಿಮೆಯಾಗಿದೆ. ಕಾನೂನು ಪ್ರಕಾರ ಗ್ರಾಮಸಭೆಯಲ್ಲಿ 100 ಜನ ಗ್ರಾಮಸ್ಥರು ಭಾಗಿಯಾಗಬೇಕು ಎಂದರು.

ಗ್ರಾಮಸ್ಥರಲ್ಲಿ ಸಭೆಯ ಮುಂದೂಡಿಕೆಯ ಚರ್ಚೆಗಳು ನಡೆದು, ಅಧ್ಯಕ್ಷರಾದ ಶ್ರೀಮತಿ ಸವಿತಾ ರವರು ಗ್ರಾಮಸ್ಥರ ಅಭಿಪ್ರಾಯವನ್ನು ಪಡೆದು ಗ್ರಾಮ ಸಭೆಯನ್ನು ಮುಂದೂಡಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಶ್ರೀಮತಿ ಸುಮಲತಾ, ಪ್ರಭಾಕರ ಆಚಾರ್ಯ, ಚಂದ್ರಶೇಖರ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಜಯಲಕ್ಷ್ಮಿ, ವೇಣುಗೋಪಾಲ ಶೆಟ್ಟಿ, ಶ್ರೀಮತಿ ದೀಪಿಕಾ, ಶ್ರೀಮತಿ ಶಶಿಕಲಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಸ್ವಾಗತಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ ನಿರೂಪಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!