July 23, 2026
Uncategorized

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ :ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ ಶ್ರುತ ಕೀರ್ತಿರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಸಿಇಟಿ, ನೀಟ್ ನಂತಹ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕಾದರೆ ವಿದ್ಯಾರ್ಥಿ ಸ್ವ ಆಸಕ್ತಿಯಿಂದ ಇಷ್ಟಪಟ್ಟು ಅಧ್ಯಯನ ಮಾಡಬೇಕು. ಪರೀಕ್ಷೆಯ ಫಲಿತಾಂಶ ಬರುವವರೆಗೆ ತಾಳ್ಮೆಯಿಂದ ಕಾಯಬೇಕು.ಆತಂಕದಿಂದ ಆತುರದ ನಿರ್ಧಾರ ಕೈಗೊಂಡು ಅಧಿಕ ವೆಚ್ಚ ಮಾಡಿ ವಿವಿಧ ಕೋರ್ಸ್ಗಳನ್ನು ಮಾಡುವ ಯೋಚನೆಯಿಂದ ಹೊರಬರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ವಿನಯಾ ಬಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಿಗೆ ಶುಭ ಕೋರಿದ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!