38.6 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತಿಕಾ ದಂಪತಿಯ ಪುತ್ರರಾಗಿರುವ ಆಪದ್ಭಾಂಧವ ಬಾಬಾ ಜಲೀಲ್(40ವ) ಅವರು ತನ್ನ ಕೂದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು ಅವರು ಕೇಶಮುಂಡನ ಮಾಡಿಕೊಂಡರು.
ಹಿರಿಯ ಆಂಬುಲೆನ್ಸ್ ಚಾಲಕರಾಗಿರುವ ಜಲೀಲ್ ಅವರು ಎಲ್ಲೇ ಅಪಘಾತ ಅಥವಾ ಅಪರಾಧ ಚಟುವಟಿಕೆಗಳು ನಡೆದಾಗ ಪೊಲೀಸರಿಗೆ ಸಹಕಾರಿಯಾಗಿ ತಕ್ಷಣ ಸ್ಥಳಕ್ಕೆ ಧಾವಿಸಿ ತುರ್ತು ಸ್ಪಂದನ ನೀಡುವ ಕಾರ್ಯ ಮಾಡುತ್ತಿದ್ದಾರೆ. ಅನೇಕ ಮಂದಿಯ ಪ್ರಾಣ ರಕ್ಷಣೆ ಮಾಡಿರುವ ಅವರು ಮಂಗಳೂರು ಏರ್ ಇಂಡಿಯಾ ವಿಮಾನ ದುರಂತ ಸಂದರ್ಭದ ಕಾರ್ಯಾಚರ
ಣೆಯಲ್ಲೂ ಭಾಗಿಯಾಗಿದ್ದರು.

Related posts

ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya
error: Content is protected !!