23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ :ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ ಶ್ರುತ ಕೀರ್ತಿರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಸಿಇಟಿ, ನೀಟ್ ನಂತಹ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕಾದರೆ ವಿದ್ಯಾರ್ಥಿ ಸ್ವ ಆಸಕ್ತಿಯಿಂದ ಇಷ್ಟಪಟ್ಟು ಅಧ್ಯಯನ ಮಾಡಬೇಕು. ಪರೀಕ್ಷೆಯ ಫಲಿತಾಂಶ ಬರುವವರೆಗೆ ತಾಳ್ಮೆಯಿಂದ ಕಾಯಬೇಕು.ಆತಂಕದಿಂದ ಆತುರದ ನಿರ್ಧಾರ ಕೈಗೊಂಡು ಅಧಿಕ ವೆಚ್ಚ ಮಾಡಿ ವಿವಿಧ ಕೋರ್ಸ್ಗಳನ್ನು ಮಾಡುವ ಯೋಚನೆಯಿಂದ ಹೊರಬರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ವಿನಯಾ ಬಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

Suddi Udaya
error: Content is protected !!