September 6, 2026
Uncategorized

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ :ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ ಶ್ರುತ ಕೀರ್ತಿರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಸಿಇಟಿ, ನೀಟ್ ನಂತಹ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕಾದರೆ ವಿದ್ಯಾರ್ಥಿ ಸ್ವ ಆಸಕ್ತಿಯಿಂದ ಇಷ್ಟಪಟ್ಟು ಅಧ್ಯಯನ ಮಾಡಬೇಕು. ಪರೀಕ್ಷೆಯ ಫಲಿತಾಂಶ ಬರುವವರೆಗೆ ತಾಳ್ಮೆಯಿಂದ ಕಾಯಬೇಕು.ಆತಂಕದಿಂದ ಆತುರದ ನಿರ್ಧಾರ ಕೈಗೊಂಡು ಅಧಿಕ ವೆಚ್ಚ ಮಾಡಿ ವಿವಿಧ ಕೋರ್ಸ್ಗಳನ್ನು ಮಾಡುವ ಯೋಚನೆಯಿಂದ ಹೊರಬರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ವಿನಯಾ ಬಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya
error: Content is protected !!