24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ‌
ಮಕ್ಕಳೊಂದಿಗೆ ಭಾವನಾತ್ಮಕವಾಗಿ ಮಾತಾಡಿ ಸ್ನೇಹಿತರಂತೆ ಹೇಳಿಕೊಟ್ಟು ನಂಬಿಕೆಯಿಂದ ಜೀವನ ನಡೆಸಬೇಕು ಎಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಆನಂದ. ಡಿ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಗದ್ದೆಯಲ್ಲಿ ಬೀಜ ಬಿತ್ತಿ ಉತ್ತಮ ಫಲ ಪಡೆದ ಹಾಗೆ ಮೌಲ್ಯಯುತವಾದ ಜೀವನ ಕ್ರಮಗಳನ್ನು ತಿಳಿಸಿ ಉತ್ತಮ ವ್ಯಕ್ತಿತ್ವವನ್ನು ಪಡೆಯುವಂತೆ ಪ್ರೇರಣೆಯನ್ನು ನೀಡಬೇಕು. ಸಮಾಜದ ಎಲ್ಲಾ ವಿಚಾರಗಳಲ್ಲಿ ಮಕ್ಕಳು ಪಾಲುಗೊಳ್ಳುವಂತೆ ಪೋಷಕರು ಕಾಳಜಿ ವಹಿಸಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ, ಕಾರ್ಯಕ್ರಮ ನಿರೂಪಿಸಿದವರು.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya
error: Content is protected !!