27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕ
ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ಸೆ 09ರಂದು ಅಪರಾಹ್ಣ 3–00 ಗಂಟೆಗೆ ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮವನ್ನು ನಡೆಸಲಾಯಿತು.ಗಮಕ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರು, ಗಮಕ ಕಲಾವಿದರು , ಚಿಂತಕರು, ಸಾಹಿತಿಗಳೂ ಆಗಿರುವ ಪ್ರೊ.ಗಣಪತಿ ಭಟ್ ಕುಳಮರ್ವ ಮತ್ತು ಶ್ರೀ ಉಂಡೆಮನೆ ವಿಶ್ವೇಶ್ವರ ಭಟ್ಟರು ಅತ್ಯಂತ ಮನೋಜ್ಞವಾಗಿ ನಡೆಸಿಕೊಟ್ಟರು.

ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕುಮಾರವ್ಯಾಸನ ಕೌರವೇಂದ್ರನ ಕೊಂದೆ ನೀನು ಕಾವ್ಯವನ್ನು ಶ್ರೀ ವಿಶ್ವೇಶ್ವರ ಭಟ್ಟರು ವಾಚಿಸಿ, ಪ್ರೊ. ಗಣಪತಿ ಭಟ್ ಕುಳಮರ್ವರು ವ್ಯಾಖ್ಯಾನಿಸಿದರು.ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡದ್ದುಕಾರ್ಯಕ್ರಮದ ಆಕರ್ಷಣೆಯಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಮುನಾರವರು ವಹಿಸಿಕೊಂಡು ಅಭಾಸಾಪದ ಸಾಹಿತ್ಯದ ಕಾರ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮವು ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆಆರಂಭಗೊಂಡಿತು. ಅಭಾಸಾಪ ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಜತೆ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಆಶಾ ಅಡೂರ್‌ರವರು ಧನ್ಯವಾದವನ್ನಿತ್ತರು. ಶಾಲಾ ಸಿಬ್ಬಂದಿಯರೊಂದಿಗೆ ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿ ಶ್ರೀಮತಿ ಮೇಧಾರವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಿಗೂ, ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿಗೂ.. ವಿದ್ಯಾರ್ಥಿಗಳಿಗೂ ಅಭಾಸಾಪದ ಪರವಾಗಿ ಪುಸ್ತಕ ಸ್ಮರಣಿಕೆಯನ್ನು ನೀಡಲಾಯಿತು

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya
error: Content is protected !!