July 24, 2026
Uncategorized

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕ
ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ಸೆ 09ರಂದು ಅಪರಾಹ್ಣ 3–00 ಗಂಟೆಗೆ ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮವನ್ನು ನಡೆಸಲಾಯಿತು.ಗಮಕ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರು, ಗಮಕ ಕಲಾವಿದರು , ಚಿಂತಕರು, ಸಾಹಿತಿಗಳೂ ಆಗಿರುವ ಪ್ರೊ.ಗಣಪತಿ ಭಟ್ ಕುಳಮರ್ವ ಮತ್ತು ಶ್ರೀ ಉಂಡೆಮನೆ ವಿಶ್ವೇಶ್ವರ ಭಟ್ಟರು ಅತ್ಯಂತ ಮನೋಜ್ಞವಾಗಿ ನಡೆಸಿಕೊಟ್ಟರು.

ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕುಮಾರವ್ಯಾಸನ ಕೌರವೇಂದ್ರನ ಕೊಂದೆ ನೀನು ಕಾವ್ಯವನ್ನು ಶ್ರೀ ವಿಶ್ವೇಶ್ವರ ಭಟ್ಟರು ವಾಚಿಸಿ, ಪ್ರೊ. ಗಣಪತಿ ಭಟ್ ಕುಳಮರ್ವರು ವ್ಯಾಖ್ಯಾನಿಸಿದರು.ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡದ್ದುಕಾರ್ಯಕ್ರಮದ ಆಕರ್ಷಣೆಯಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಮುನಾರವರು ವಹಿಸಿಕೊಂಡು ಅಭಾಸಾಪದ ಸಾಹಿತ್ಯದ ಕಾರ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮವು ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆಆರಂಭಗೊಂಡಿತು. ಅಭಾಸಾಪ ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಜತೆ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಆಶಾ ಅಡೂರ್‌ರವರು ಧನ್ಯವಾದವನ್ನಿತ್ತರು. ಶಾಲಾ ಸಿಬ್ಬಂದಿಯರೊಂದಿಗೆ ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿ ಶ್ರೀಮತಿ ಮೇಧಾರವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಿಗೂ, ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿಗೂ.. ವಿದ್ಯಾರ್ಥಿಗಳಿಗೂ ಅಭಾಸಾಪದ ಪರವಾಗಿ ಪುಸ್ತಕ ಸ್ಮರಣಿಕೆಯನ್ನು ನೀಡಲಾಯಿತು

Related posts

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya
error: Content is protected !!