September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

ಮೇಲಂತಬೆಟ್ಟು : ಸೆ.10ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ರವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಪ್ರಥಮ ಸುತ್ತಿನ ಗ್ರಾಮಸಭೆಯು ಕೊರಂ ಕೊರತೆಯಿಂದಾಗಿ ಮುಂದೂಡಲಾಗಿದೆ.

ಗ್ರಾಮಸ್ಥರಾದ ರಾಜೇಶ್ ಭಟ್ ಮಾತನಾಡಿ ಮೂರು ವಾರ್ಡ್ ಗಳ ಗ್ರಾಮಸ್ಥರನ್ನು ತಾಳೆ ಮಾಡಿ ನೋಡಿದಾಗ ಸಭೆಗೆ ಹಾಜರಾದ ಗ್ರಾಮಸ್ಥ ಸಂಖ್ಯೆ ಕಡಿಮೆಯಾಗಿದೆ. ಕಾನೂನು ಪ್ರಕಾರ ಗ್ರಾಮಸಭೆಯಲ್ಲಿ 100 ಜನ ಗ್ರಾಮಸ್ಥರು ಭಾಗಿಯಾಗಬೇಕು ಎಂದರು.

ಗ್ರಾಮಸ್ಥರಲ್ಲಿ ಸಭೆಯ ಮುಂದೂಡಿಕೆಯ ಚರ್ಚೆಗಳು ನಡೆದು, ಅಧ್ಯಕ್ಷರಾದ ಶ್ರೀಮತಿ ಸವಿತಾ ರವರು ಗ್ರಾಮಸ್ಥರ ಅಭಿಪ್ರಾಯವನ್ನು ಪಡೆದು ಗ್ರಾಮ ಸಭೆಯನ್ನು ಮುಂದೂಡಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಶ್ರೀಮತಿ ಸುಮಲತಾ, ಪ್ರಭಾಕರ ಆಚಾರ್ಯ, ಚಂದ್ರಶೇಖರ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಜಯಲಕ್ಷ್ಮಿ, ವೇಣುಗೋಪಾಲ ಶೆಟ್ಟಿ, ಶ್ರೀಮತಿ ದೀಪಿಕಾ, ಶ್ರೀಮತಿ ಶಶಿಕಲಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಸ್ವಾಗತಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ ನಿರೂಪಿಸಿ, ಧನ್ಯವಾದವಿತ್ತರು.

Related posts

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!