July 31, 2026
ಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತಿಕಾ ದಂಪತಿಯ ಪುತ್ರರಾಗಿರುವ ಆಪದ್ಭಾಂಧವ ಬಾಬಾ ಜಲೀಲ್(40ವ) ಅವರು ತನ್ನ ಕೂದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು ಅವರು ಕೇಶಮುಂಡನ ಮಾಡಿಕೊಂಡರು.
ಹಿರಿಯ ಆಂಬುಲೆನ್ಸ್ ಚಾಲಕರಾಗಿರುವ ಜಲೀಲ್ ಅವರು ಎಲ್ಲೇ ಅಪಘಾತ ಅಥವಾ ಅಪರಾಧ ಚಟುವಟಿಕೆಗಳು ನಡೆದಾಗ ಪೊಲೀಸರಿಗೆ ಸಹಕಾರಿಯಾಗಿ ತಕ್ಷಣ ಸ್ಥಳಕ್ಕೆ ಧಾವಿಸಿ ತುರ್ತು ಸ್ಪಂದನ ನೀಡುವ ಕಾರ್ಯ ಮಾಡುತ್ತಿದ್ದಾರೆ. ಅನೇಕ ಮಂದಿಯ ಪ್ರಾಣ ರಕ್ಷಣೆ ಮಾಡಿರುವ ಅವರು ಮಂಗಳೂರು ಏರ್ ಇಂಡಿಯಾ ವಿಮಾನ ದುರಂತ ಸಂದರ್ಭದ ಕಾರ್ಯಾಚರ
ಣೆಯಲ್ಲೂ ಭಾಗಿಯಾಗಿದ್ದರು.

Related posts

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya
error: Content is protected !!