25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತಿಕಾ ದಂಪತಿಯ ಪುತ್ರರಾಗಿರುವ ಆಪದ್ಭಾಂಧವ ಬಾಬಾ ಜಲೀಲ್(40ವ) ಅವರು ತನ್ನ ಕೂದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು ಅವರು ಕೇಶಮುಂಡನ ಮಾಡಿಕೊಂಡರು.
ಹಿರಿಯ ಆಂಬುಲೆನ್ಸ್ ಚಾಲಕರಾಗಿರುವ ಜಲೀಲ್ ಅವರು ಎಲ್ಲೇ ಅಪಘಾತ ಅಥವಾ ಅಪರಾಧ ಚಟುವಟಿಕೆಗಳು ನಡೆದಾಗ ಪೊಲೀಸರಿಗೆ ಸಹಕಾರಿಯಾಗಿ ತಕ್ಷಣ ಸ್ಥಳಕ್ಕೆ ಧಾವಿಸಿ ತುರ್ತು ಸ್ಪಂದನ ನೀಡುವ ಕಾರ್ಯ ಮಾಡುತ್ತಿದ್ದಾರೆ. ಅನೇಕ ಮಂದಿಯ ಪ್ರಾಣ ರಕ್ಷಣೆ ಮಾಡಿರುವ ಅವರು ಮಂಗಳೂರು ಏರ್ ಇಂಡಿಯಾ ವಿಮಾನ ದುರಂತ ಸಂದರ್ಭದ ಕಾರ್ಯಾಚರ
ಣೆಯಲ್ಲೂ ಭಾಗಿಯಾಗಿದ್ದರು.

Related posts

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya
error: Content is protected !!