September 16, 2026
ಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತಿಕಾ ದಂಪತಿಯ ಪುತ್ರರಾಗಿರುವ ಆಪದ್ಭಾಂಧವ ಬಾಬಾ ಜಲೀಲ್(40ವ) ಅವರು ತನ್ನ ಕೂದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು ಅವರು ಕೇಶಮುಂಡನ ಮಾಡಿಕೊಂಡರು.
ಹಿರಿಯ ಆಂಬುಲೆನ್ಸ್ ಚಾಲಕರಾಗಿರುವ ಜಲೀಲ್ ಅವರು ಎಲ್ಲೇ ಅಪಘಾತ ಅಥವಾ ಅಪರಾಧ ಚಟುವಟಿಕೆಗಳು ನಡೆದಾಗ ಪೊಲೀಸರಿಗೆ ಸಹಕಾರಿಯಾಗಿ ತಕ್ಷಣ ಸ್ಥಳಕ್ಕೆ ಧಾವಿಸಿ ತುರ್ತು ಸ್ಪಂದನ ನೀಡುವ ಕಾರ್ಯ ಮಾಡುತ್ತಿದ್ದಾರೆ. ಅನೇಕ ಮಂದಿಯ ಪ್ರಾಣ ರಕ್ಷಣೆ ಮಾಡಿರುವ ಅವರು ಮಂಗಳೂರು ಏರ್ ಇಂಡಿಯಾ ವಿಮಾನ ದುರಂತ ಸಂದರ್ಭದ ಕಾರ್ಯಾಚರ
ಣೆಯಲ್ಲೂ ಭಾಗಿಯಾಗಿದ್ದರು.

Related posts

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ಡಿಎಂ ಆರೋಹಂ-2026 ಸಮಾರೋಪ ಸಮಾರಂಭ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!