25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ :ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ ಶ್ರುತ ಕೀರ್ತಿರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಸಿಇಟಿ, ನೀಟ್ ನಂತಹ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕಾದರೆ ವಿದ್ಯಾರ್ಥಿ ಸ್ವ ಆಸಕ್ತಿಯಿಂದ ಇಷ್ಟಪಟ್ಟು ಅಧ್ಯಯನ ಮಾಡಬೇಕು. ಪರೀಕ್ಷೆಯ ಫಲಿತಾಂಶ ಬರುವವರೆಗೆ ತಾಳ್ಮೆಯಿಂದ ಕಾಯಬೇಕು.ಆತಂಕದಿಂದ ಆತುರದ ನಿರ್ಧಾರ ಕೈಗೊಂಡು ಅಧಿಕ ವೆಚ್ಚ ಮಾಡಿ ವಿವಿಧ ಕೋರ್ಸ್ಗಳನ್ನು ಮಾಡುವ ಯೋಚನೆಯಿಂದ ಹೊರಬರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ವಿನಯಾ ಬಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya
error: Content is protected !!