September 6, 2026
Uncategorized

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ :ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ ಶ್ರುತ ಕೀರ್ತಿರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಸಿಇಟಿ, ನೀಟ್ ನಂತಹ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕಾದರೆ ವಿದ್ಯಾರ್ಥಿ ಸ್ವ ಆಸಕ್ತಿಯಿಂದ ಇಷ್ಟಪಟ್ಟು ಅಧ್ಯಯನ ಮಾಡಬೇಕು. ಪರೀಕ್ಷೆಯ ಫಲಿತಾಂಶ ಬರುವವರೆಗೆ ತಾಳ್ಮೆಯಿಂದ ಕಾಯಬೇಕು.ಆತಂಕದಿಂದ ಆತುರದ ನಿರ್ಧಾರ ಕೈಗೊಂಡು ಅಧಿಕ ವೆಚ್ಚ ಮಾಡಿ ವಿವಿಧ ಕೋರ್ಸ್ಗಳನ್ನು ಮಾಡುವ ಯೋಚನೆಯಿಂದ ಹೊರಬರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಶ್ರೀಮತಿ ವಿನಯಾ ಬಿಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಜು.7: ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನ ಸಭೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!