24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕ
ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ಸೆ 09ರಂದು ಅಪರಾಹ್ಣ 3–00 ಗಂಟೆಗೆ ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮವನ್ನು ನಡೆಸಲಾಯಿತು.ಗಮಕ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರು, ಗಮಕ ಕಲಾವಿದರು , ಚಿಂತಕರು, ಸಾಹಿತಿಗಳೂ ಆಗಿರುವ ಪ್ರೊ.ಗಣಪತಿ ಭಟ್ ಕುಳಮರ್ವ ಮತ್ತು ಶ್ರೀ ಉಂಡೆಮನೆ ವಿಶ್ವೇಶ್ವರ ಭಟ್ಟರು ಅತ್ಯಂತ ಮನೋಜ್ಞವಾಗಿ ನಡೆಸಿಕೊಟ್ಟರು.

ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕುಮಾರವ್ಯಾಸನ ಕೌರವೇಂದ್ರನ ಕೊಂದೆ ನೀನು ಕಾವ್ಯವನ್ನು ಶ್ರೀ ವಿಶ್ವೇಶ್ವರ ಭಟ್ಟರು ವಾಚಿಸಿ, ಪ್ರೊ. ಗಣಪತಿ ಭಟ್ ಕುಳಮರ್ವರು ವ್ಯಾಖ್ಯಾನಿಸಿದರು.ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡದ್ದುಕಾರ್ಯಕ್ರಮದ ಆಕರ್ಷಣೆಯಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಮುನಾರವರು ವಹಿಸಿಕೊಂಡು ಅಭಾಸಾಪದ ಸಾಹಿತ್ಯದ ಕಾರ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮವು ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆಆರಂಭಗೊಂಡಿತು. ಅಭಾಸಾಪ ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಜತೆ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಆಶಾ ಅಡೂರ್‌ರವರು ಧನ್ಯವಾದವನ್ನಿತ್ತರು. ಶಾಲಾ ಸಿಬ್ಬಂದಿಯರೊಂದಿಗೆ ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿ ಶ್ರೀಮತಿ ಮೇಧಾರವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಿಗೂ, ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿಗೂ.. ವಿದ್ಯಾರ್ಥಿಗಳಿಗೂ ಅಭಾಸಾಪದ ಪರವಾಗಿ ಪುಸ್ತಕ ಸ್ಮರಣಿಕೆಯನ್ನು ನೀಡಲಾಯಿತು

Related posts

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya
error: Content is protected !!