24.6 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಪಡಂಗಡಿ: ಇಲ್ಲಿಯ ಬದ್ಯಾರು ಸಮೀಪ ವಿಧ್ವತ್ ಕಾಲೇಜಿನ ಎದುರು ಸ್ಕೂಟರ್ ಗೆ ವಾಹನ ಡಿಕ್ಕಿಹೊಡೆದು ಪರಾರಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡಿರುವ ಸ್ಕೂಟರ್ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡಂಗಡಿ ನಿವಾಸಿ ಸುಜಿತ್‌ ಶೆಟ್ಟಿ (22ವ) ಗಾಯಗೊಂಡವರು ಎಂದು ತಿಳಿದು ಬಂದಿದೆ.

ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವ ಇವರು ಬೆಳಗ್ಗೆ 4.30ರ ಸುಮಾರಿಗೆ ಮನೆಯಿಂದ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸುಜಿತ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ ಆದರೆ ಅಪಘಾತ ನಡೆಸಿದ ವಾಹನ ನಿಲ್ಲಿಸದೆ ಪರಾರಿಯಾಗಿದೆ.ಆಂಬ್ಯೂಲೆನ್ಸ್‌ ಚಾಲಕ ಜಲೀಲ್ ಅವರ ಸಹಕಾರದೊಂದಿಗೆ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತ ನಡೆಸಿದ ಅಪರಿಚಿತ ವಾಹನದ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya
error: Content is protected !!