23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

ಮರೋಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಮರೋಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣಾನ್ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಶುಪಾಲನಾ ಅಧಿಕಾರಿಗಳಾದ ಕೆ ಸದಾಶಿವ ಭಟ್, ಸುಕೀರ್ತಿ ಜೈನ್ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

ಪೆರಾಡಿ ಮತ್ತು ಮರೋಡಿ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಬಿರಗಳಲ್ಲಿ ಸುಮಾರು ೧೯೨ ಸಾಕು ನಾಯಿಗಳಿಗೆ ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ನೀಡಲಾಯಿತು.

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮಾಧುರ್ಯ ಜಿ ರಾಜ್ಯಕ್ಕೆ ಪ್ರಥಮ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!