38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

ಕಲ್ಮಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ವಿಶ್ವ ಹಿಂದೂ ಪರಿಷದ್, ಬಜರಂಗದಳ, ಕಲ್ಮಂಜ ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಸೆ.೭ರಂದು ಸ.ಹಿ.ಪ್ರಾಥಮಿಕ ಶಾಲೆ ಸಿದ್ಧಬೈಲುನಲ್ಲಿ ನಡೆಯಿತು.

ಸಂಜೆ ಶ್ರೀ ಸದಾಶೀವೇಶ್ವರ ಭಜನಾ ತಂಡ ಸತ್ಯನಪಲ್ಕೆ ಮಕ್ಕಳ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.

ಬೆಳಗ್ಗೆ ಸಮಿತಿ ಸದಸ್ಯರ ಸಮ್ಮುಖದಲ್ಲಿ ಗಣಹೋಮ ನಡೆಯಿತು ನಂತರ ಅಟೋಟ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮವು ಮೋಹಿನಿ ಕೆ. ಅಖPಈ ಹಾಗೂ ರುಕ್ಮಯ್ಯ ಗೌಡ ಕರಿಯನೆಲ ನಿವೃತ್ತ ಯೋಧರು ಇವರ ಸಮ್ಮುಖದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಅದ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಲೋಹಿತ್ ಎಂ ವಹಿಸಿದ್ದರು.
ಧಾರ್ಮಿಕ ಉಪನ್ಯಾಸಕರಾಗಿ ಡಾ|| ರವಿ ಮಂಡ್ಯ. ಸಹಪ್ರಾಧ್ಯಾಪಕರು ಮತ್ತು ಸಂಯೋಜಕರು ಸ್ನಾತಕೋತ್ತರ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಆಗಮಿಸಿದ್ದರು.

ಮುಖ್ಯ ಅತಿಥಿಗಳಾಗಿ ಸಂತೋಷ್ ಕುಮಾರ್, ಅತ್ತಾಜೆ ಸಂಯೋಜಕರು ಬಜರಂಗದಳ ಬೆಳ್ತಂಗಡಿ ಪ್ರಖಂಡ, ಮುರಳೀಧರ ಗೌಡ ಬಜರಂಗದಳ ಸಹ ಸಂಚಾಲಕರು ಕಲ್ಮಂಜ, ದಿನೇಶ್ ಗೌಡ ಮೂಡಾಯಿಬೆಟ್ಟು ಅಧ್ಯಕ್ಷರು Sಆಒಅ ಸಿದ್ಧಬೈಲು ಪರಾರಿ ಶಾಲೆ, ಕಲ್ಮಂಜ ಆಗಮಿಸಿದ್ದರು.

ಸಭಾ ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಾದ ತನುಶ್ರೀ ಕಲ್ಮಂಜ, ಅದಿತಿ ಚಿಪ್ಲೊಣ್ಕರ್ ಹಾಗೂ ಹಂಸಿನಿ ಭಿಡೆ ಅವರನ್ನು ಸನ್ಮಾನಿಸಲಾಯಿತು. ಅನಿಲ್ ಮದ್ಮಲ್ಕಟ್ಟೆ ಸ್ವಾಗತಿಸಿದರು. ಸಾಂತಪ್ಪ ಎಂ ಮದ್ಮಲ್ಕಟ್ಟೆ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya
error: Content is protected !!