ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

ಬೆಳ್ತಂಗಡಿ ರಾಜ್ಯಾದ್ಯಂತ ಸೆ12ರಂದು ತೆರೆಕಾಣಲಿರುವ ಬಹು ನಿರೀಕ್ಷಿತ ದೊಡ್ಡ ಬಜೆಟಿನ ಕನ್ನಡ ಚಲನಚಿತ್ರ ರಾನಿ ಇದರ ನಟ, ಕನ್ನಡತಿ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಯುವ ನಾಯಕ ನಟ ಕಿರಣರಾಜ್ ಸೆ.10ರಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಕಾರ್ಯಕಾರಿ ನಿರ್ಮಾಪಕ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರಾಗಿದ್ದಾರೆ.

ಬೆಳ್ತಂಗಡಿಯ ವೇಣೂರಿನ ಕರಿಮಣೇಲು ಮೂಲದ ಉದ್ಯಮಿ ಉಮೇಶ್ ಹೆಗ್ಡೆ ಚಲಾಯಿಸುತ್ತಿದ್ದ ಬೆಂಝ್ ಕಾರು ಬೆಂಗಳೂರಿನ ನಾಗರಬಾವಿಯಲ್ಲಿ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಟ ಕಿರಣ್‌ರಾಜ್ ಎದೆಗೆ ಮುಂದಿನ ಸೀಟ್ ಗುದ್ದಿ ಉಸಿರಾಟಕ್ಕೆ ಸಮಸ್ಯೆಯಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಅವರನ್ನು ಕೂಡಲೇ ಸಮೀಪದ ಬೆಂಗಳೂರು ಹಾಸ್ಪಿಟಲ್ ಕೆಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಇದೀಗ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಗಿರೀಶ್ ಹೆಗ್ಡೆಯವರು ಸೀಟ್ ಬೆಲ್ಟ್ ಹಾಕಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿರುವಾಗ ಈ ಘಟನೆ ನಡೆದಿದೆ.

Leave a Comment

error: Content is protected !!