22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಅಪರಾಧ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

ಬೆಳ್ತಂಗಡಿ ರಾಜ್ಯಾದ್ಯಂತ ಸೆ12ರಂದು ತೆರೆಕಾಣಲಿರುವ ಬಹು ನಿರೀಕ್ಷಿತ ದೊಡ್ಡ ಬಜೆಟಿನ ಕನ್ನಡ ಚಲನಚಿತ್ರ ರಾನಿ ಇದರ ನಟ, ಕನ್ನಡತಿ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಯುವ ನಾಯಕ ನಟ ಕಿರಣರಾಜ್ ಸೆ.10ರಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಕಾರ್ಯಕಾರಿ ನಿರ್ಮಾಪಕ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರಾಗಿದ್ದಾರೆ.

ಬೆಳ್ತಂಗಡಿಯ ವೇಣೂರಿನ ಕರಿಮಣೇಲು ಮೂಲದ ಉದ್ಯಮಿ ಉಮೇಶ್ ಹೆಗ್ಡೆ ಚಲಾಯಿಸುತ್ತಿದ್ದ ಬೆಂಝ್ ಕಾರು ಬೆಂಗಳೂರಿನ ನಾಗರಬಾವಿಯಲ್ಲಿ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಟ ಕಿರಣ್‌ರಾಜ್ ಎದೆಗೆ ಮುಂದಿನ ಸೀಟ್ ಗುದ್ದಿ ಉಸಿರಾಟಕ್ಕೆ ಸಮಸ್ಯೆಯಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಅವರನ್ನು ಕೂಡಲೇ ಸಮೀಪದ ಬೆಂಗಳೂರು ಹಾಸ್ಪಿಟಲ್ ಕೆಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಇದೀಗ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಗಿರೀಶ್ ಹೆಗ್ಡೆಯವರು ಸೀಟ್ ಬೆಲ್ಟ್ ಹಾಕಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿರುವಾಗ ಈ ಘಟನೆ ನಡೆದಿದೆ.

Related posts

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya
error: Content is protected !!