23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಅಪರಾಧ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

ಬೆಳ್ತಂಗಡಿ ರಾಜ್ಯಾದ್ಯಂತ ಸೆ12ರಂದು ತೆರೆಕಾಣಲಿರುವ ಬಹು ನಿರೀಕ್ಷಿತ ದೊಡ್ಡ ಬಜೆಟಿನ ಕನ್ನಡ ಚಲನಚಿತ್ರ ರಾನಿ ಇದರ ನಟ, ಕನ್ನಡತಿ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಯುವ ನಾಯಕ ನಟ ಕಿರಣರಾಜ್ ಸೆ.10ರಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಕಾರ್ಯಕಾರಿ ನಿರ್ಮಾಪಕ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರಾಗಿದ್ದಾರೆ.

ಬೆಳ್ತಂಗಡಿಯ ವೇಣೂರಿನ ಕರಿಮಣೇಲು ಮೂಲದ ಉದ್ಯಮಿ ಉಮೇಶ್ ಹೆಗ್ಡೆ ಚಲಾಯಿಸುತ್ತಿದ್ದ ಬೆಂಝ್ ಕಾರು ಬೆಂಗಳೂರಿನ ನಾಗರಬಾವಿಯಲ್ಲಿ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಟ ಕಿರಣ್‌ರಾಜ್ ಎದೆಗೆ ಮುಂದಿನ ಸೀಟ್ ಗುದ್ದಿ ಉಸಿರಾಟಕ್ಕೆ ಸಮಸ್ಯೆಯಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಅವರನ್ನು ಕೂಡಲೇ ಸಮೀಪದ ಬೆಂಗಳೂರು ಹಾಸ್ಪಿಟಲ್ ಕೆಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಇದೀಗ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಗಿರೀಶ್ ಹೆಗ್ಡೆಯವರು ಸೀಟ್ ಬೆಲ್ಟ್ ಹಾಕಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿರುವಾಗ ಈ ಘಟನೆ ನಡೆದಿದೆ.

Related posts

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya
error: Content is protected !!