September 6, 2026
ಅಪಘಾತಅಪರಾಧ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

ಬೆಳ್ತಂಗಡಿ ರಾಜ್ಯಾದ್ಯಂತ ಸೆ12ರಂದು ತೆರೆಕಾಣಲಿರುವ ಬಹು ನಿರೀಕ್ಷಿತ ದೊಡ್ಡ ಬಜೆಟಿನ ಕನ್ನಡ ಚಲನಚಿತ್ರ ರಾನಿ ಇದರ ನಟ, ಕನ್ನಡತಿ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಯುವ ನಾಯಕ ನಟ ಕಿರಣರಾಜ್ ಸೆ.10ರಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಕಾರ್ಯಕಾರಿ ನಿರ್ಮಾಪಕ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರಾಗಿದ್ದಾರೆ.

ಬೆಳ್ತಂಗಡಿಯ ವೇಣೂರಿನ ಕರಿಮಣೇಲು ಮೂಲದ ಉದ್ಯಮಿ ಉಮೇಶ್ ಹೆಗ್ಡೆ ಚಲಾಯಿಸುತ್ತಿದ್ದ ಬೆಂಝ್ ಕಾರು ಬೆಂಗಳೂರಿನ ನಾಗರಬಾವಿಯಲ್ಲಿ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಟ ಕಿರಣ್‌ರಾಜ್ ಎದೆಗೆ ಮುಂದಿನ ಸೀಟ್ ಗುದ್ದಿ ಉಸಿರಾಟಕ್ಕೆ ಸಮಸ್ಯೆಯಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಅವರನ್ನು ಕೂಡಲೇ ಸಮೀಪದ ಬೆಂಗಳೂರು ಹಾಸ್ಪಿಟಲ್ ಕೆಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಇದೀಗ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಗಿರೀಶ್ ಹೆಗ್ಡೆಯವರು ಸೀಟ್ ಬೆಲ್ಟ್ ಹಾಕಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿರುವಾಗ ಈ ಘಟನೆ ನಡೆದಿದೆ.

Related posts

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya
error: Content is protected !!