23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಅಪರಾಧ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

ಬೆಳ್ತಂಗಡಿ ರಾಜ್ಯಾದ್ಯಂತ ಸೆ12ರಂದು ತೆರೆಕಾಣಲಿರುವ ಬಹು ನಿರೀಕ್ಷಿತ ದೊಡ್ಡ ಬಜೆಟಿನ ಕನ್ನಡ ಚಲನಚಿತ್ರ ರಾನಿ ಇದರ ನಟ, ಕನ್ನಡತಿ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಯುವ ನಾಯಕ ನಟ ಕಿರಣರಾಜ್ ಸೆ.10ರಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಕಾರ್ಯಕಾರಿ ನಿರ್ಮಾಪಕ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರಾಗಿದ್ದಾರೆ.

ಬೆಳ್ತಂಗಡಿಯ ವೇಣೂರಿನ ಕರಿಮಣೇಲು ಮೂಲದ ಉದ್ಯಮಿ ಉಮೇಶ್ ಹೆಗ್ಡೆ ಚಲಾಯಿಸುತ್ತಿದ್ದ ಬೆಂಝ್ ಕಾರು ಬೆಂಗಳೂರಿನ ನಾಗರಬಾವಿಯಲ್ಲಿ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಟ ಕಿರಣ್‌ರಾಜ್ ಎದೆಗೆ ಮುಂದಿನ ಸೀಟ್ ಗುದ್ದಿ ಉಸಿರಾಟಕ್ಕೆ ಸಮಸ್ಯೆಯಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಅವರನ್ನು ಕೂಡಲೇ ಸಮೀಪದ ಬೆಂಗಳೂರು ಹಾಸ್ಪಿಟಲ್ ಕೆಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಇದೀಗ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಗಿರೀಶ್ ಹೆಗ್ಡೆಯವರು ಸೀಟ್ ಬೆಲ್ಟ್ ಹಾಕಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿರುವಾಗ ಈ ಘಟನೆ ನಡೆದಿದೆ.

Related posts

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya
error: Content is protected !!