ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಬೆಳ್ತಂಗಡಿ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಬನ್ನಿಸ್ , ಕಬ್, ಬುಲ್ ಬುಲ್ಸ್, ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣಪತಿಯನ್ನು ರಚನೆ ಮಾಡಿ, ಪೂಜಿಸಿ, ಆರಾಧಿಸಿ ನಂತರ ವಿಸರ್ಜಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಟ್ಟಣ ಪಂಚಾಯಿತಿಯ ಮುಖ್ಯಧಿಕಾರಿ ರಾಜೇಶ್ ಬಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಧಿಕಾರಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ದೆಯು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು‌ ನಡೆಸುತಾ ಬಂದಿದ್ದು, ಪರಿಸರ ಸ್ನೇಹಿ ಗಣಪತಿಯನ್ನು ರಚಿಸುವುದರಲ್ಲಿಯೂ ಸಮಾಜದ ಹಿತರಕ್ಷಣೆಯ ಕಾರ್ಯವನ್ನು ಸಾಧಿಸಿದೆ ಎಂದು ತಿಳಿಸಿದರು.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೈಡ್ ವಿದ್ಯಾರ್ಥಿನಿ ಪ್ರಾಪ್ತಿ ವಿ ಶೆಟ್ಟಿ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸಿದರು. ಗೈಡ್ ಕ್ಯಾಪ್ಟನ್ ಶ್ರೀಮತಿ ಕಾರುಣ್ಯ ಸ್ಕೌಟ್ ಮಾಸ್ಟರ್ ಗಳಾದ ಜಯರಾಮ್, ಮಂಜುನಾಥ್ ರವರ ಸಹಕಾರದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Leave a Comment

error: Content is protected !!