23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಸೆ. 8 ರಂದು ಉಜಿರೆಯ ಗಣೇಶ ಚತುರ್ಥಿ ಹಬ್ಬದ ಸಾರ್ವಜನಿಕ ಸಮಾರಂಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ವಿಷಯ ಜಾತಿ ವೈಮನಸ್ಸು ಉಂಟುಮಾಡಲು,ಸಮುದಾಯಗಳ ನಡುವೆ ಅಶಾಂತಿ ಹಾಗೂ ಧಾರ್ಮಿಕ ಭಾವನೆಗಳಿಗೆ ತೀವ್ರ ಘಾಸಿಯಾಗಿದ್ದು, ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಜಿರೆಯ ಅಜಿತ್ ಹೆಗ್ಡೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಗಣೇಶ ಚೌತಿಯ ಹಬ್ಬದ ಧಾರ್ಮಿಕ ಸಮಾರಂಭದಲ್ಲಿ ಜೈನ ಸಮುದಾಯಕ್ಕೆ ಬೆದರಿಕೆ ಹಾಕಿ, ಟೀಕೆ ಮಾಡಿ, ಅವಹೇಳನಕಾರಿ ಭಾಷಣ ಮಾಡಿದ್ದಾರೆ. ಜೈನ ಮತ್ತು ಹಿಂದೂ ಸಮುದಾಯದ ನಡುವೆ ಅಶಾಂತಿಯನ್ನು ಪ್ರೇರೇಪಿಸಲು ಮತ್ತು ಅಪಾಯಕರವಾದ ಪರಿಸರವನ್ನು ನಿರ್ಮಿಸಲು ಉದ್ದೇಶಿಸಿರುವುದು ಸ್ಪಷ್ಟವಾಗಿವೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸಮುದಾಯಗಳನ್ನು ಬೆದರಿಸಿರುವುದಲ್ಲದೆ ಹಲವಾರು ದೇವರ ಮತ್ತು ದೇವಸ್ಥಾನ ಮೊದಲಾದ ಸಾರ್ವಜನಿಕ ಸಂಸ್ಥೆಗಳ ವಿರುದ್ಧ ಅವಹೇಳನ ಪೂರ್ಣ ಶಬ್ದಗಳನ್ನು ಬಳಸಿ, ಜೈನ ವರ್ಗದ ಜನರ ಮತ್ತು ಜೈನ ಸಮುದಾಯಗಳ ಸಂಸ್ಥೆಗಳ ಮೇಲಿನ ಗೌರವವನ್ನು ಕುಗ್ಗಿಸಲು ಯತ್ನಿಸಿಸಲಾಗಿದೆ.

ಜೈನ ಹಾಗೂ ಹಿಂದೂ ಬಾಂಧವರ ಮಧ್ಯೆ ಜಾತಿ-ಧರ್ಮದ ಆಧಾರದಲ್ಲಿ ವೈರತ್ವ ಬೆಳೆಸುವ ದೊಡ್ಡ ಮಟ್ಟದ ಹಾಗೂ ದೂರಗಾಮಿ ಹುನ್ನಾರ ಮಾಡಲಾಗಿದೆ. ಇದು ಏಕತೆಗೆ ಮಾರಕವಾದ ದುರುದ್ದೇಶ ಎಂದು ದೂರಿನಲ್ಲಿ ತಿಳಿಸಿದ್ದಾರೆ.

“ಮೊದಲಿನಿಂದಲೂ ಭಾರತದ ಮೇಲೆ ಇಲ್ಲಿ ಎಷ್ಟೆಷ್ಟು ದಾಳಿಗಳಾಗಿವೆ? ಪೋರ್ಚರು, ಡಚ್ಚರು,ಫ್ರೆಂಚರು, ಅವರು, ಇವರು ಮೊಗಲರು, ಬ್ರಿಟಿಷರು, ಇವತ್ತು ಜೈನರು ಕೂಡಾ ಸ್ವತಂತ್ರ ಭಾರತದಲ್ಲಿ ಸನಾತನವಾದ ಹಿಂದೂ ಧರ್ಮವನ್ನು ಹಿಂದೂ ದೇವಾಸ್ಥಾನಗಳನ್ನು ಅದರ ದಾಖಲೆಗಳನ್ನು ನಾಶ ಮಾಡಿ ಇವತ್ತು ಜೈನರ ವಶ ಮಾಡಿಕೊಂಡಿದ್ದಾರಲ್ಲಾ… ಏನು ಹೇಳುತ್ತದೆ ಈ ಹಿಂದೂ ಸಮಾಜ?, ಏನು ಹೇಳುತ್ತದೆ ಈ ದೇಶದ ವಿಶ್ವ ಹಿಂದೂ ಪರಿಷತ್, ಏನು ಹೇಳುತ್ತದೆ? ಈ ದೇಶದ ಭಜರಂಗದಳ, ಏನು ಹೇಳುತ್ತದೆ? ಹಿಂದೂ ಸಂಘಟನೆಗಳು, ನಮ್ಮನ್ನು ಸಾಕಿ ಬೆಳೆಸಿದಂತಹ ಮಹೋನ್ನತ ಸಂಘಟನೆ ಆರ್.ಎಸ್.ಎಸ್. ಏನು ಹೇಳುತ್ತದೆ ಇವತ್ತು”?, ಮತ್ತು “ಒಟ್ಟು 0.04% ಇರುವ ಜೈನರು ಇವತ್ತು 86% ಇರುವ ಹಿಂದೂಗಳನ್ನು ಮೂರ್ಖರನ್ನಾಗಿಸಿದ್ದಾರೆ”. ಮತ್ತು “ಮುಂದಿನ ದಿನಗಳಲ್ಲಿ ಕ್ರಾಂತಿಯಾಗುತ್ತದೆ”.

ಈ ಪ್ರಚೋದನಾಕಾರಿ ಹೇಳಿಕೆಗಳು ಸಾರ್ವಜನಿಕವಾಗಿ ಕಾಳಿಚ್ಚಿನಂತೆ ಹರಿದಾಡುತ್ತಿದ್ದು ನನಗೆ ಅಭದ್ರತೆಯ ಭಾಸವಾಗುತ್ತಿದೆ ಇದರ ಬಗ್ಗೆ
ತ್ವರಿತವಾಗಿ ತನಿಖೆ ನಡೆಸಿ ಸಾರ್ವಜನಿಕ ಶಾಂತಿ ಮತ್ತು ನ್ಯಾಯಕ್ಕಾಗಿ ಅಗತ್ಯವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

Related posts

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರರ 2ನೇ ವರ್ಷದ ಪುಣ್ಯಸ್ಮರಣೆ ;ಶ್ರೀ ಗುರುದೇವ ಸಹಕಾರಿ ಸಂಘ ಮತ್ತು ಶ್ರೀ ಗು.ನಾ.ಸ್ವಾ.ಸೇ ಸಂಘದಿಂದ ಸಿಯೋನ್ ಆಶ್ರಮದಲ್ಲಿ ಆಚರಣೆವಸಂತ ಬಂಗೇರರು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು: ಭಗೀರಥ ಜಿ

Suddi Udaya
error: Content is protected !!