July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಉಜಿರೆ ಇವುಗಳ ಸಹಭಾಗಿತ್ವದಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ 2024-25 ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯು ಹನ್ನೊಂದು ಬಹುಮಾನಗಳನ್ನು ಗೆದ್ದುಕೊಂಡಿದೆ.

ಮೂರು ಪ್ರಥಮ ಬಹುಮಾನ, ಐದು ದ್ವಿತೀಯ ಹಾಗೂ ಮೂರು ತೃತೀಯ ಬಹುಮಾನಗಳು ಲಭಿಸಿವೆ.

ಆಲಾಪ್ ಎಂ. (ಇಂಗ್ಲಿಷ್ ಭಾಷಣ), ಅಕ್ಷಯ್ ಕೃಷ್ಣ (ರಂಗೋಲಿ) ಹಾಗೂ ಕವನ, ಶ್ರೇಯ, ಸ್ವೀಕೃತಿ, ಹರಿಣಿ, ಸುಧನ್ವ ಮತ್ತು ಸಚಿತ್ ಭಟ್ (ಕವಾಲಿ -ಸಮೂಹ) ಪ್ರಥಮ ಬಹುಮಾನ ಗೆದ್ದಿದ್ದಾರೆ.

ದೀಪಿಕಾ ಡಿ.ಕೆ. (ಸಂಸ್ಕೃತ ಭಾಷಣ), ಫಾಯಿಝ (ಧಾರ್ಮಿಕ ಪಠಣ -ಅರೇಬಿಕ್), ತೌಫೀರ (ಚಿತ್ರಕಲೆ), ಬಿ. ತಸ್ಮಯ್ (ಕವನ ವಾಚನ) ಹಾಗೂ ಸೃಜನ್ (ಗಝಲ್) ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜಯ್ ಕುಮಾರ್ (ಮಿಮಿಕ್ರಿ), ಆಧ್ಯ ರಾವ್ (ಭರತನಾಟ್ಯ) ಹಾಗೂ ನಿರೀಕ್ಷಾ, ಅನ್ವಿತಾ, ನಿಶ್ಮಿತ, ದೀಕ್ಷಾ, ಚಿನ್ಮಿತ ಸನ್ನಿಧಿ, ಚಿಂತನ್ ಮತ್ತು ನಿಹಾಲ್ (ಜನಪದ ನೃತ್ಯ -ಸಮೂಹ) ತೃತೀಯ ಬಹುಮಾನ ಪಡೆದಿದ್ದಾರೆ.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ನಾಳ : ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಸಂಧ್ಯಾ , ಕಾರ್ಯದರ್ಶಿಯಾಗಿ ರಾಜೀವಿ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya
error: Content is protected !!