24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶ ಚತುರ್ಥಿ ವಿಸರ್ಜನಾ ಕಾರ್ಯಕ್ರಮಕ್ಕೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಸ್ವಾಗತಿಸಿದ್ದು, ಸಾರ್ವಜನಿಕರಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಯುವಕರ ಸೇನೆ ಆಯೋಜಿಸಿರುವ ಗಣೇಶೋತ್ಸವ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ನಾಯಕರೇ ಬಿಜೆಪಿ ಶಾಸಕರನ್ನು ಆಹ್ವಾನಿಸಿರುವುದು ಕಾಂಗ್ರೆಸ್‌ನ ಕೆಲವು ನಾಯಕರಲ್ಲಿ ಅಸಮಾಧಾನ ಉಂಟು ಮಾಡಿದೆ.

ಮಾನ್ವಿ ನಗರದಲ್ಲಿ ವಿವಿಧ ಮುಖ್ಯ ರಸ್ತೆಗಳಲ್ಲಿ ಹರೀಶ್ ಪೂಂಜಾ ಅವರನ್ನು ಸ್ವಾಗತಿಸಿ ಹಾಕಿರುವ ಫ್ಲೆಕ್ಸ್‌ನಲ್ಲಿ ಜಿಲ್ಲೆಯ ಸಚಿವರಾದ ಎನ್ ಎಸ್ ಬೋಸರಾಜ, ಅವರ ಮಗ ರವಿ ಬೋಸರಾಜ್, ಮಾನ್ವಿ ಶಾಸಕ ಹಂಪಯ್ಯ ನಾಯಕ, ಎಂಎಲ್‌ಸಿ ಬಸನಗೌಡ ಬಾದರ್ಲಿ ಕಾಣಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Related posts

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya
error: Content is protected !!