July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶ ಚತುರ್ಥಿ ವಿಸರ್ಜನಾ ಕಾರ್ಯಕ್ರಮಕ್ಕೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಸ್ವಾಗತಿಸಿದ್ದು, ಸಾರ್ವಜನಿಕರಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಯುವಕರ ಸೇನೆ ಆಯೋಜಿಸಿರುವ ಗಣೇಶೋತ್ಸವ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ನಾಯಕರೇ ಬಿಜೆಪಿ ಶಾಸಕರನ್ನು ಆಹ್ವಾನಿಸಿರುವುದು ಕಾಂಗ್ರೆಸ್‌ನ ಕೆಲವು ನಾಯಕರಲ್ಲಿ ಅಸಮಾಧಾನ ಉಂಟು ಮಾಡಿದೆ.

ಮಾನ್ವಿ ನಗರದಲ್ಲಿ ವಿವಿಧ ಮುಖ್ಯ ರಸ್ತೆಗಳಲ್ಲಿ ಹರೀಶ್ ಪೂಂಜಾ ಅವರನ್ನು ಸ್ವಾಗತಿಸಿ ಹಾಕಿರುವ ಫ್ಲೆಕ್ಸ್‌ನಲ್ಲಿ ಜಿಲ್ಲೆಯ ಸಚಿವರಾದ ಎನ್ ಎಸ್ ಬೋಸರಾಜ, ಅವರ ಮಗ ರವಿ ಬೋಸರಾಜ್, ಮಾನ್ವಿ ಶಾಸಕ ಹಂಪಯ್ಯ ನಾಯಕ, ಎಂಎಲ್‌ಸಿ ಬಸನಗೌಡ ಬಾದರ್ಲಿ ಕಾಣಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Related posts

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!