25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಕೊಕ್ಕಡ : ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.12ರಂದು ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ. ರವರು ಸಂಘವು 31.40 ಕೋಟಿ ಠೇವಣಿ ಹೊಂದಿದ್ದು, ರೂ. 38.30 ಕೋಟಿ ಸಾಲ ಹೊರಬಾಕಿ ಇದ್ದು ವರ್ಷಾಂತ್ಯಕ್ಕೆ ಶೇ. 98%ರಷ್ಟು ವಸೂಲಾತಿ ಆಗಿರುತ್ತದೆ. ವಾರ್ಷಿಕ ರೂ. 214.90 ಕೋಟಿ ವ್ಯವಹಾರ ನಡೆಸಿ ಗರಿಷ್ಠ ರೂ. 1,16,15,869.66 ಲಾಭ ಗಳಿಸಿ ಆಡಿಟ್ ವರ್ಗಿಕರಣದಲ್ಲಿ ‘ಎ’ ತರಗತಿ ಪಡೆದುಕೊಂಡಿದ್ದು, ಸದಸ್ಯರಿಗೆ ಶೇ. 14 ಡಿವಿಡೆಂಟ್ ಘೋಷಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ, ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪಿ. ಯವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಈಶ್ವರ ಭಟ್, ನಿರ್ದೇಶಕರಾದ ಜಾರಪ್ಪ ಗೌಡ ಎಸ್., ಮಹಾಬಲ ಶೆಟ್ಟಿ, ಪದ್ಮನಾಭ ಗೌಡ, ವಿಶ್ವನಾಥ ಕೆ., ವಿಠಲ ಭಂಡಾಟಿ , ಶ್ರೀಮತಿ ಪ್ರೇಮಾವತಿ, ಶ್ರೀಮತಿ ವೇದಾವತಿ , ವಿಶ್ವನಾಥ ಎಂ.ಕೆ, ಕೇಶವ ಕೆ., ಮೋನಪ್ಪ , ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಕೆ ಉಪಸ್ಥಿತರಿದ್ದರು.

ಸಹನಾ, ಚೈತನ್ಯ ಪ್ರಾರ್ಥಿಸಿದರು. ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ ಸ್ವಾಗತಿಸಿದರು. ಗುಮಾಸ್ತ ಸುಂದರ ಗೌಡ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!