ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾವಳಿಯು ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಬಾಲಕರ ವಿಭಾಗದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನಿಯಾಗಿದೆ.

ತಾಲೂಕಿನ ವಿವಿಧ ಕಾಲೇಜುಗಳ 15 ತಂಡಗಳು ಭಾಗವಹಿಸಿದ್ದವು. ಕಿಶನ್ ಕುಮಾರ್ “ಅತ್ಯುತ್ತಮ ಧಾಳಿಗಾರ” ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ದೈಹಿಕ ಶಿಕ್ಷಕರ ಹುದ್ದೆಯೇ ಇಲ್ಲದ ಸರಕಾರೀ ಕಾಲೇಜಿನ ಗ್ರಾಮೀಣ ಮಕ್ಕಳ ಏಕಲವ್ಯ ಸಾಧನೆಗೆ ಇದು ಸಾಕ್ಷಿಯಾಗಿದೆ.

Leave a Comment

error: Content is protected !!