25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

ಬೆಳ್ತಂಗಡಿ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಬನ್ನಿಸ್ , ಕಬ್, ಬುಲ್ ಬುಲ್ಸ್, ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣಪತಿಯನ್ನು ರಚನೆ ಮಾಡಿ, ಪೂಜಿಸಿ, ಆರಾಧಿಸಿ ನಂತರ ವಿಸರ್ಜಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಟ್ಟಣ ಪಂಚಾಯಿತಿಯ ಮುಖ್ಯಧಿಕಾರಿ ರಾಜೇಶ್ ಬಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಧಿಕಾರಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ದೆಯು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು‌ ನಡೆಸುತಾ ಬಂದಿದ್ದು, ಪರಿಸರ ಸ್ನೇಹಿ ಗಣಪತಿಯನ್ನು ರಚಿಸುವುದರಲ್ಲಿಯೂ ಸಮಾಜದ ಹಿತರಕ್ಷಣೆಯ ಕಾರ್ಯವನ್ನು ಸಾಧಿಸಿದೆ ಎಂದು ತಿಳಿಸಿದರು.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೈಡ್ ವಿದ್ಯಾರ್ಥಿನಿ ಪ್ರಾಪ್ತಿ ವಿ ಶೆಟ್ಟಿ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸಿದರು. ಗೈಡ್ ಕ್ಯಾಪ್ಟನ್ ಶ್ರೀಮತಿ ಕಾರುಣ್ಯ ಸ್ಕೌಟ್ ಮಾಸ್ಟರ್ ಗಳಾದ ಜಯರಾಮ್, ಮಂಜುನಾಥ್ ರವರ ಸಹಕಾರದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Related posts

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya
error: Content is protected !!