27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ವೇಣೂರು ಪೊಲೀಸ್ ಠಾಣೆಗೆ ಮನವಿ

ವೇಣೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್ ಶೆಟ್ಟಿ ತಿಮರೋಡಿ ಸೆ.8ರಂದು ಉಜಿರೆಯಲ್ಲಿ ನಡೆದ ಗಣೇಶ ಚತುರ್ಥಿ ಸಭೆಯಲ್ಲಿ ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಷಮ್ಯ ಉಂಟು ಮಾಡಲು ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಚಂದ್ರರಾಜ್ ವೇಣೂರು ಎಂಬವರು ವೇಣೂರು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಇವತ್ತು ಧರ್ಮಸ್ಥಳ ಅನ್ನುವಂತಹ ಆ ಒಂದು ಸನಾತನ ಹಿಂದೂ ಧರ್ಮದ ಧರ್ಮಪೀಠ, ನ್ಯಾಯಪೀಠ ಏನಿದೆಯೋ ಅದು ಇವತ್ತು ಜೈನರ ವಶವಾಗಿದೆ. ಪೋರ್ಚುಗೀಸರು, ಡಚ್ಚರು, ಫ್ರೆಂಚರು, ಬ್ರಿಟಿಷರು, ಇವತ್ತು ಜೈನರು ಕೂಡ ಸ್ವತಂತ್ರ ಭಾರತದಲ್ಲಿ ಸನಾತನವಾದ ಹಿಂದೂ ಧರ್ಮವನ್ನು ಹಿಂದೂ ದೇವಸ್ಥಾನಗಳ ದಾಖಲೆಗಳನ್ನು ನಾಶ ಮಾಡಿ ಜೈನರ ವಶ ಮಾಡಿಕೊಂಡಿದ್ದಾರೆ. ಶೇ.0.04 ಇರುವ ಜೈನರು ಶೇ.86 ಇರುವ ಹಿಂದೂಗಳನ್ನು ಮೂರ್ಖರನ್ನಾಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಕ್ರಾಂತಿಯಾಗುತ್ತದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಭಾಷಣ ಮಾಡಿದ್ದಾರೆ. ಜೈನ ಸಮುದಾಯಕ್ಕೆ ಬೆದರಿಕೆ ಹಾಕಿ, ಟೀಕೆ ಮಾಡಿದ್ದು ಜಾತಿ ಮತ್ತು ಧಾರ್ಮಿಕ ಸಾಮರಸ್ಯ ಭಂಗ ಮಾಡುವ ಉದ್ದೇಶದಿಂದ ಅವಹೇಳನಕಾರಿ ಭಾಷಣ ಮಾಡಿದ್ದಾರೆ. ಜೈನ ಮತ್ತು ಹಿಂದೂ ಧರ್ಮ, ಸಮುದಾಯಗಳ ನಡುವೆ ಹಿಂಸಾತ್ಮಕ ಘಟನೆಗಳನ್ನು ಉಂಟು ಮಾಡಲು ಮತ್ತು ಜನರು ದಂಗೆ ಏಳುವಂತೆ ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ 2023ರ ಕಾಯ್ದೆಯ ಕಲಂ 196, 197, 299ರ ಅಡಿಯಲ್ಲಿ ಮಾತ್ರವಲ್ಲದೆ, ಇತರ ಕಾನೂನುಗಳ ಅಡಿಯಲ್ಲಿ ತ್ವರಿತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೀಡಿರುವ ಮನವಿಯಲ್ಲಿ ತಿಳಿಸಲಾಗಿದೆ.

Related posts

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ನಿಡ್ಲೆ ಆನಂದ ವೇಲ್ನೇಸ್ ರೆಸಾಟ್೯ನ ಮಹಡಿಯಿಂದ ಬಿದ್ದು ನಿಡ್ಲೆಯ ಯುವಕ ಮನೀಶ್ ಮೃತ್ಯು

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya
error: Content is protected !!