July 23, 2026
ಆರೋಗ್ಯ

ಮಾನವ ಸಂಬಂಧಗಳು ಮತ್ತು ಧನಾತ್ಮಕ ಮನೋಭಾವದ ಕುರಿತು (Human Relations and Positive Attitude) ಸಂವಾದಾತ್ಮಕ ಕಾರ್ಯಾಗಾರ

ಮಾನವ ಸಂಬಂಧಗಳು ಮತ್ತು ಧನಾತ್ಮಕ ಮನೋಭಾವದ ಕುರಿತು (Human Relations and Positive Attitude) ಸಂವಾದಾತ್ಮಕ ಕಾರ್ಯಾಗಾರ :ಸೇವಾಧಾಮ ಪುನಶ್ಚೇತನ ಕೇಂದ್ರ ಸೌತಡ್ಕದಲ್ಲಿ ನಡೆದ ‘ಸಿಬ್ಬಂದಿಗಳ ಸಾಮರ್ಥ್ಯ ನಿರ್ಮಾಣ ಕಾರ್ಯಕ್ರಮ’ದ ಅಡಿಯಲ್ಲಿ ಮಾನವ ಸಂಬಂಧಗಳು ಮತ್ತು ಧನಾತ್ಮಕ ಮನೋಭಾವದ ಕುರಿತು (Human Relations and Positive Attitude) ಸಂವಾದಾತ್ಮಕ ಕಾರ್ಯಾಗಾರವನ್ನು ಸಂಪನ್ಮೂಲ ವ್ಯಕ್ತಿಯಾಗಿ ಎಸ್ ಡಿ ಎಮ್ ವಸತಿಯುತ ಪಿ ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾI ಟಿ. ಕೃಷ್ಣಮೂರ್ತಿ ಸೆ. 12ರಂದು ನಡೆಸಿಕೊಟ್ಟರು.

ವ್ಯಕ್ತಿಗತ ಚಿಂತನೆಯಲ್ಲಿ ನಕಾರಾತ್ಮಕ ಮನೋಭಾವವನ್ನು ಹೊಂದಿದ್ದರೆ, ಅದರ ಪ್ರತಿಯಾಗಿ ಪಡೆಯಲಿರುವುದು ನಕಾರಾತ್ಮಕತೆ ಮಾತ್ರ. ಸಕಾರಾತ್ಮ ಮನೋಭಾವವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವುದರಿಂದ ಸಂಬಂಧದ ಬಗ್ಗೆ ಕಾಳಜಿ ವಹಿಸುತ್ತೀರಿ ಎಂದರು. ನಿತ್ಯ ಜೀವನದ ಒತ್ತಡ ನಡುವೆ ಮಾನವೀಯ ಸಂಬಂಧಗಳು ಮತ್ತು ಧನಾತ್ಮಕ ಮನೋಭಾವನೆಯ ಪ್ರಾಮುಖ್ಯತೆಯ ಬಗೆಗೆ ಸವಿಸ್ತಾರವಾಗಿ, ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಮಾಹಿತಿ ಇತ್ತರು. ಸಂಸ್ಥೆಯ ಪರವಾಗಿ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ.), ಕೊಕ್ಕಡ ಅಧ್ಯಕ್ಷರಾದ ಶ್ರೀ ಕೆ. ಕೃಷ್ಣ ಭಟ್, ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್, ಕಾರ್ಯದರ್ಶಿ ಶ್ರೀ ಬಾಲಕೃಷ್ಣ, ಸ್ವಯಂಸೇವಕರಾದ ಶ್ರೀ ಮೈಲಾರಿ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗ, ಕೇಂದ್ರದ ಸನಿವಾಸಿಗಳು, ಆರೈಕೆದಾರರು ಹಾಗೂ ಸ್ವಯಂಸೇವಕರು ಸೇರಿ ಒಟ್ಟು 25 ಮಂದಿ ಭಾಗವಹಿಸಿದ್ದರು. ಸೇವಾಭಾರತಿಯ ಅಕೌಂಟೆಂಟ್ ಕುI ಅಕ್ಷತಾ ಸ್ವಾಗತಿಸಿ, ನಿರೂಪಿಸಿ, ಹಿರಿಯ ಪ್ರಬಂಧಕಾರದ ಚರಣ್ ಕುಮಾರ್ ಎಂ. ಧನ್ಯವಾದವಿತ್ತರು.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಬೆಳ್ತಂಗಡಿಯಲ್ಲಿ ನಡೆದಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ 48 ದಿನಗಳ ಉಚಿತ ಯೋಗ ತರಗತಿ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!