29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಉಜಿರೆ ಇವುಗಳ ಸಹಭಾಗಿತ್ವದಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ 2024-25 ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯು ಹನ್ನೊಂದು ಬಹುಮಾನಗಳನ್ನು ಗೆದ್ದುಕೊಂಡಿದೆ.

ಮೂರು ಪ್ರಥಮ ಬಹುಮಾನ, ಐದು ದ್ವಿತೀಯ ಹಾಗೂ ಮೂರು ತೃತೀಯ ಬಹುಮಾನಗಳು ಲಭಿಸಿವೆ.

ಆಲಾಪ್ ಎಂ. (ಇಂಗ್ಲಿಷ್ ಭಾಷಣ), ಅಕ್ಷಯ್ ಕೃಷ್ಣ (ರಂಗೋಲಿ) ಹಾಗೂ ಕವನ, ಶ್ರೇಯ, ಸ್ವೀಕೃತಿ, ಹರಿಣಿ, ಸುಧನ್ವ ಮತ್ತು ಸಚಿತ್ ಭಟ್ (ಕವಾಲಿ -ಸಮೂಹ) ಪ್ರಥಮ ಬಹುಮಾನ ಗೆದ್ದಿದ್ದಾರೆ.

ದೀಪಿಕಾ ಡಿ.ಕೆ. (ಸಂಸ್ಕೃತ ಭಾಷಣ), ಫಾಯಿಝ (ಧಾರ್ಮಿಕ ಪಠಣ -ಅರೇಬಿಕ್), ತೌಫೀರ (ಚಿತ್ರಕಲೆ), ಬಿ. ತಸ್ಮಯ್ (ಕವನ ವಾಚನ) ಹಾಗೂ ಸೃಜನ್ (ಗಝಲ್) ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜಯ್ ಕುಮಾರ್ (ಮಿಮಿಕ್ರಿ), ಆಧ್ಯ ರಾವ್ (ಭರತನಾಟ್ಯ) ಹಾಗೂ ನಿರೀಕ್ಷಾ, ಅನ್ವಿತಾ, ನಿಶ್ಮಿತ, ದೀಕ್ಷಾ, ಚಿನ್ಮಿತ ಸನ್ನಿಧಿ, ಚಿಂತನ್ ಮತ್ತು ನಿಹಾಲ್ (ಜನಪದ ನೃತ್ಯ -ಸಮೂಹ) ತೃತೀಯ ಬಹುಮಾನ ಪಡೆದಿದ್ದಾರೆ.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya
error: Content is protected !!