September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶ ಚತುರ್ಥಿ ವಿಸರ್ಜನಾ ಕಾರ್ಯಕ್ರಮಕ್ಕೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಸ್ವಾಗತಿಸಿದ್ದು, ಸಾರ್ವಜನಿಕರಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಯುವಕರ ಸೇನೆ ಆಯೋಜಿಸಿರುವ ಗಣೇಶೋತ್ಸವ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ನಾಯಕರೇ ಬಿಜೆಪಿ ಶಾಸಕರನ್ನು ಆಹ್ವಾನಿಸಿರುವುದು ಕಾಂಗ್ರೆಸ್‌ನ ಕೆಲವು ನಾಯಕರಲ್ಲಿ ಅಸಮಾಧಾನ ಉಂಟು ಮಾಡಿದೆ.

ಮಾನ್ವಿ ನಗರದಲ್ಲಿ ವಿವಿಧ ಮುಖ್ಯ ರಸ್ತೆಗಳಲ್ಲಿ ಹರೀಶ್ ಪೂಂಜಾ ಅವರನ್ನು ಸ್ವಾಗತಿಸಿ ಹಾಕಿರುವ ಫ್ಲೆಕ್ಸ್‌ನಲ್ಲಿ ಜಿಲ್ಲೆಯ ಸಚಿವರಾದ ಎನ್ ಎಸ್ ಬೋಸರಾಜ, ಅವರ ಮಗ ರವಿ ಬೋಸರಾಜ್, ಮಾನ್ವಿ ಶಾಸಕ ಹಂಪಯ್ಯ ನಾಯಕ, ಎಂಎಲ್‌ಸಿ ಬಸನಗೌಡ ಬಾದರ್ಲಿ ಕಾಣಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Related posts

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya
error: Content is protected !!