July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿ

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

ಬೆಳ್ತಂಗಡಿ : ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಸೆ.12 ರಂದು ಬೆಳ್ತಂಗಡಿಯ ಮೂರುಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಕ್ಷೇತ್ರ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಮಾತನಾಡಿ, ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಆರಂಭಗೊಂಡು ವರ್ಷಗಳೆ ಕಳೆದರು ಇನ್ನು ಕಾಮಗಾರಿ ಪೂರ್ಣಗೊಳ್ಳದೆ ದಿನ ನಿತ್ಯ ಅಫಘಾತಗಳು ಸಂಭವಿಸುತ್ತಿವೆ. ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಚಿಕ್ಕಮಗಳೂರು ಮತ್ತು ದ. ಕ ಜಿಲ್ಲೆಯ ಸಂಪರ್ಕ ರಸ್ತೆಯಾಗಿರುದರಿಂದ ನಿತ್ಯ ಸಾವಿರಾರು ವಾಹನಗಳು ಮೂಲಕ ಸಂಚರಿಸುತ್ತವೆ. ಹದಗೆಟ್ಟ ರಸ್ತೆಯಿಂದ ರಾಜ್ಯ ಸಾರಿಗೆ ಬಸ್‌ಗಳನ್ನು ಕಡಿಮೆಗೊಳಿಸಲಾಗಿದೆ. ವ್ಯಾಪಾರ ವಹಿವಾಟಿಗಾಗಿ ತೊಂದರೆಯಾಗಿದೆ. ಉಭಯ ಜಿಲ್ಲೆಗಳ ಸಂಪರ್ಕವೇ ಕಡಿತಗೊಳ್ಳುವ ಆತಂಕ ಇದೆ. ತಕ್ಷಣ ರಸ್ತೆ ನಿರ್ಮಾಣದ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.


ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಬೆಳ್ತಂಗಡಿ ಮುಖಂಡರು, ಕಾರ್ಯಕರ್ತರು, ನಾಗರೀಕರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya
error: Content is protected !!