September 6, 2026
ಅಪರಾಧ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ವೇಣೂರು ಪೊಲೀಸ್ ಠಾಣೆಗೆ ಮನವಿ

ವೇಣೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್ ಶೆಟ್ಟಿ ತಿಮರೋಡಿ ಸೆ.8ರಂದು ಉಜಿರೆಯಲ್ಲಿ ನಡೆದ ಗಣೇಶ ಚತುರ್ಥಿ ಸಭೆಯಲ್ಲಿ ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಷಮ್ಯ ಉಂಟು ಮಾಡಲು ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಚಂದ್ರರಾಜ್ ವೇಣೂರು ಎಂಬವರು ವೇಣೂರು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಇವತ್ತು ಧರ್ಮಸ್ಥಳ ಅನ್ನುವಂತಹ ಆ ಒಂದು ಸನಾತನ ಹಿಂದೂ ಧರ್ಮದ ಧರ್ಮಪೀಠ, ನ್ಯಾಯಪೀಠ ಏನಿದೆಯೋ ಅದು ಇವತ್ತು ಜೈನರ ವಶವಾಗಿದೆ. ಪೋರ್ಚುಗೀಸರು, ಡಚ್ಚರು, ಫ್ರೆಂಚರು, ಬ್ರಿಟಿಷರು, ಇವತ್ತು ಜೈನರು ಕೂಡ ಸ್ವತಂತ್ರ ಭಾರತದಲ್ಲಿ ಸನಾತನವಾದ ಹಿಂದೂ ಧರ್ಮವನ್ನು ಹಿಂದೂ ದೇವಸ್ಥಾನಗಳ ದಾಖಲೆಗಳನ್ನು ನಾಶ ಮಾಡಿ ಜೈನರ ವಶ ಮಾಡಿಕೊಂಡಿದ್ದಾರೆ. ಶೇ.0.04 ಇರುವ ಜೈನರು ಶೇ.86 ಇರುವ ಹಿಂದೂಗಳನ್ನು ಮೂರ್ಖರನ್ನಾಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಕ್ರಾಂತಿಯಾಗುತ್ತದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಭಾಷಣ ಮಾಡಿದ್ದಾರೆ. ಜೈನ ಸಮುದಾಯಕ್ಕೆ ಬೆದರಿಕೆ ಹಾಕಿ, ಟೀಕೆ ಮಾಡಿದ್ದು ಜಾತಿ ಮತ್ತು ಧಾರ್ಮಿಕ ಸಾಮರಸ್ಯ ಭಂಗ ಮಾಡುವ ಉದ್ದೇಶದಿಂದ ಅವಹೇಳನಕಾರಿ ಭಾಷಣ ಮಾಡಿದ್ದಾರೆ. ಜೈನ ಮತ್ತು ಹಿಂದೂ ಧರ್ಮ, ಸಮುದಾಯಗಳ ನಡುವೆ ಹಿಂಸಾತ್ಮಕ ಘಟನೆಗಳನ್ನು ಉಂಟು ಮಾಡಲು ಮತ್ತು ಜನರು ದಂಗೆ ಏಳುವಂತೆ ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ 2023ರ ಕಾಯ್ದೆಯ ಕಲಂ 196, 197, 299ರ ಅಡಿಯಲ್ಲಿ ಮಾತ್ರವಲ್ಲದೆ, ಇತರ ಕಾನೂನುಗಳ ಅಡಿಯಲ್ಲಿ ತ್ವರಿತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೀಡಿರುವ ಮನವಿಯಲ್ಲಿ ತಿಳಿಸಲಾಗಿದೆ.

Related posts

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

Suddi Udaya

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya
error: Content is protected !!