23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ವೇಣೂರು ಪೊಲೀಸ್ ಠಾಣೆಗೆ ಮನವಿ

ವೇಣೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್ ಶೆಟ್ಟಿ ತಿಮರೋಡಿ ಸೆ.8ರಂದು ಉಜಿರೆಯಲ್ಲಿ ನಡೆದ ಗಣೇಶ ಚತುರ್ಥಿ ಸಭೆಯಲ್ಲಿ ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಷಮ್ಯ ಉಂಟು ಮಾಡಲು ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಚಂದ್ರರಾಜ್ ವೇಣೂರು ಎಂಬವರು ವೇಣೂರು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಇವತ್ತು ಧರ್ಮಸ್ಥಳ ಅನ್ನುವಂತಹ ಆ ಒಂದು ಸನಾತನ ಹಿಂದೂ ಧರ್ಮದ ಧರ್ಮಪೀಠ, ನ್ಯಾಯಪೀಠ ಏನಿದೆಯೋ ಅದು ಇವತ್ತು ಜೈನರ ವಶವಾಗಿದೆ. ಪೋರ್ಚುಗೀಸರು, ಡಚ್ಚರು, ಫ್ರೆಂಚರು, ಬ್ರಿಟಿಷರು, ಇವತ್ತು ಜೈನರು ಕೂಡ ಸ್ವತಂತ್ರ ಭಾರತದಲ್ಲಿ ಸನಾತನವಾದ ಹಿಂದೂ ಧರ್ಮವನ್ನು ಹಿಂದೂ ದೇವಸ್ಥಾನಗಳ ದಾಖಲೆಗಳನ್ನು ನಾಶ ಮಾಡಿ ಜೈನರ ವಶ ಮಾಡಿಕೊಂಡಿದ್ದಾರೆ. ಶೇ.0.04 ಇರುವ ಜೈನರು ಶೇ.86 ಇರುವ ಹಿಂದೂಗಳನ್ನು ಮೂರ್ಖರನ್ನಾಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಕ್ರಾಂತಿಯಾಗುತ್ತದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಭಾಷಣ ಮಾಡಿದ್ದಾರೆ. ಜೈನ ಸಮುದಾಯಕ್ಕೆ ಬೆದರಿಕೆ ಹಾಕಿ, ಟೀಕೆ ಮಾಡಿದ್ದು ಜಾತಿ ಮತ್ತು ಧಾರ್ಮಿಕ ಸಾಮರಸ್ಯ ಭಂಗ ಮಾಡುವ ಉದ್ದೇಶದಿಂದ ಅವಹೇಳನಕಾರಿ ಭಾಷಣ ಮಾಡಿದ್ದಾರೆ. ಜೈನ ಮತ್ತು ಹಿಂದೂ ಧರ್ಮ, ಸಮುದಾಯಗಳ ನಡುವೆ ಹಿಂಸಾತ್ಮಕ ಘಟನೆಗಳನ್ನು ಉಂಟು ಮಾಡಲು ಮತ್ತು ಜನರು ದಂಗೆ ಏಳುವಂತೆ ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ 2023ರ ಕಾಯ್ದೆಯ ಕಲಂ 196, 197, 299ರ ಅಡಿಯಲ್ಲಿ ಮಾತ್ರವಲ್ಲದೆ, ಇತರ ಕಾನೂನುಗಳ ಅಡಿಯಲ್ಲಿ ತ್ವರಿತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೀಡಿರುವ ಮನವಿಯಲ್ಲಿ ತಿಳಿಸಲಾಗಿದೆ.

Related posts

ರೆಖ್ಯ : ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಕಲ್ಮಂಜ ನಿಡಿಗಲ್‌ನಲ್ಲಿ ಭೀಕರ ವಾಹನ ಅಪಘಾತ ಬೈಕ್‌ ಮತ್ತು ಸ್ಕಾಪಿ೯ಯೋ ನಡುವೆ ಅಪಘಾತ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು

Suddi Udaya
error: Content is protected !!