September 6, 2026
ಆರೋಗ್ಯ

ಮಾನವ ಸಂಬಂಧಗಳು ಮತ್ತು ಧನಾತ್ಮಕ ಮನೋಭಾವದ ಕುರಿತು (Human Relations and Positive Attitude) ಸಂವಾದಾತ್ಮಕ ಕಾರ್ಯಾಗಾರ

ಮಾನವ ಸಂಬಂಧಗಳು ಮತ್ತು ಧನಾತ್ಮಕ ಮನೋಭಾವದ ಕುರಿತು (Human Relations and Positive Attitude) ಸಂವಾದಾತ್ಮಕ ಕಾರ್ಯಾಗಾರ :ಸೇವಾಧಾಮ ಪುನಶ್ಚೇತನ ಕೇಂದ್ರ ಸೌತಡ್ಕದಲ್ಲಿ ನಡೆದ ‘ಸಿಬ್ಬಂದಿಗಳ ಸಾಮರ್ಥ್ಯ ನಿರ್ಮಾಣ ಕಾರ್ಯಕ್ರಮ’ದ ಅಡಿಯಲ್ಲಿ ಮಾನವ ಸಂಬಂಧಗಳು ಮತ್ತು ಧನಾತ್ಮಕ ಮನೋಭಾವದ ಕುರಿತು (Human Relations and Positive Attitude) ಸಂವಾದಾತ್ಮಕ ಕಾರ್ಯಾಗಾರವನ್ನು ಸಂಪನ್ಮೂಲ ವ್ಯಕ್ತಿಯಾಗಿ ಎಸ್ ಡಿ ಎಮ್ ವಸತಿಯುತ ಪಿ ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾI ಟಿ. ಕೃಷ್ಣಮೂರ್ತಿ ಸೆ. 12ರಂದು ನಡೆಸಿಕೊಟ್ಟರು.

ವ್ಯಕ್ತಿಗತ ಚಿಂತನೆಯಲ್ಲಿ ನಕಾರಾತ್ಮಕ ಮನೋಭಾವವನ್ನು ಹೊಂದಿದ್ದರೆ, ಅದರ ಪ್ರತಿಯಾಗಿ ಪಡೆಯಲಿರುವುದು ನಕಾರಾತ್ಮಕತೆ ಮಾತ್ರ. ಸಕಾರಾತ್ಮ ಮನೋಭಾವವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವುದರಿಂದ ಸಂಬಂಧದ ಬಗ್ಗೆ ಕಾಳಜಿ ವಹಿಸುತ್ತೀರಿ ಎಂದರು. ನಿತ್ಯ ಜೀವನದ ಒತ್ತಡ ನಡುವೆ ಮಾನವೀಯ ಸಂಬಂಧಗಳು ಮತ್ತು ಧನಾತ್ಮಕ ಮನೋಭಾವನೆಯ ಪ್ರಾಮುಖ್ಯತೆಯ ಬಗೆಗೆ ಸವಿಸ್ತಾರವಾಗಿ, ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಮಾಹಿತಿ ಇತ್ತರು. ಸಂಸ್ಥೆಯ ಪರವಾಗಿ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ.), ಕೊಕ್ಕಡ ಅಧ್ಯಕ್ಷರಾದ ಶ್ರೀ ಕೆ. ಕೃಷ್ಣ ಭಟ್, ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್, ಕಾರ್ಯದರ್ಶಿ ಶ್ರೀ ಬಾಲಕೃಷ್ಣ, ಸ್ವಯಂಸೇವಕರಾದ ಶ್ರೀ ಮೈಲಾರಿ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗ, ಕೇಂದ್ರದ ಸನಿವಾಸಿಗಳು, ಆರೈಕೆದಾರರು ಹಾಗೂ ಸ್ವಯಂಸೇವಕರು ಸೇರಿ ಒಟ್ಟು 25 ಮಂದಿ ಭಾಗವಹಿಸಿದ್ದರು. ಸೇವಾಭಾರತಿಯ ಅಕೌಂಟೆಂಟ್ ಕುI ಅಕ್ಷತಾ ಸ್ವಾಗತಿಸಿ, ನಿರೂಪಿಸಿ, ಹಿರಿಯ ಪ್ರಬಂಧಕಾರದ ಚರಣ್ ಕುಮಾರ್ ಎಂ. ಧನ್ಯವಾದವಿತ್ತರು.

Related posts

ವೇಣೂರು :ಬ್ರಹತ್ ಉಚಿತ ವೈದ್ಯಕೀಯ ಹೃದಯ ರೋಗ ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!