September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಉಜಿರೆ ಇವುಗಳ ಸಹಭಾಗಿತ್ವದಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ 2024-25 ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯು ಹನ್ನೊಂದು ಬಹುಮಾನಗಳನ್ನು ಗೆದ್ದುಕೊಂಡಿದೆ.

ಮೂರು ಪ್ರಥಮ ಬಹುಮಾನ, ಐದು ದ್ವಿತೀಯ ಹಾಗೂ ಮೂರು ತೃತೀಯ ಬಹುಮಾನಗಳು ಲಭಿಸಿವೆ.

ಆಲಾಪ್ ಎಂ. (ಇಂಗ್ಲಿಷ್ ಭಾಷಣ), ಅಕ್ಷಯ್ ಕೃಷ್ಣ (ರಂಗೋಲಿ) ಹಾಗೂ ಕವನ, ಶ್ರೇಯ, ಸ್ವೀಕೃತಿ, ಹರಿಣಿ, ಸುಧನ್ವ ಮತ್ತು ಸಚಿತ್ ಭಟ್ (ಕವಾಲಿ -ಸಮೂಹ) ಪ್ರಥಮ ಬಹುಮಾನ ಗೆದ್ದಿದ್ದಾರೆ.

ದೀಪಿಕಾ ಡಿ.ಕೆ. (ಸಂಸ್ಕೃತ ಭಾಷಣ), ಫಾಯಿಝ (ಧಾರ್ಮಿಕ ಪಠಣ -ಅರೇಬಿಕ್), ತೌಫೀರ (ಚಿತ್ರಕಲೆ), ಬಿ. ತಸ್ಮಯ್ (ಕವನ ವಾಚನ) ಹಾಗೂ ಸೃಜನ್ (ಗಝಲ್) ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜಯ್ ಕುಮಾರ್ (ಮಿಮಿಕ್ರಿ), ಆಧ್ಯ ರಾವ್ (ಭರತನಾಟ್ಯ) ಹಾಗೂ ನಿರೀಕ್ಷಾ, ಅನ್ವಿತಾ, ನಿಶ್ಮಿತ, ದೀಕ್ಷಾ, ಚಿನ್ಮಿತ ಸನ್ನಿಧಿ, ಚಿಂತನ್ ಮತ್ತು ನಿಹಾಲ್ (ಜನಪದ ನೃತ್ಯ -ಸಮೂಹ) ತೃತೀಯ ಬಹುಮಾನ ಪಡೆದಿದ್ದಾರೆ.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya
error: Content is protected !!