July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

ಬೆಳ್ತಂಗಡಿ: ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಇದರ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶಿಕ್ಷಣ ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಬಳಂಜ ಶಾಲೆಯು ಪ್ರಾರಂಭವಾಗಿ 75 ವರ್ಷಗಳನ್ನು ಪೂರೈಸುತ್ತಿದ್ದು, ಬಳಂಜ, ನಾಲ್ಕೂರು, ತೆಂಕಕಾರಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಅತೀ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು, 75 ವರ್ಷ ಪೂರೈಸುತ್ತಿರುವ ಈ ಪರ್ವಕಾಲದಲ್ಲಿ ಈ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಹಾಗೂ ಕೊಠಡಿಗಳ ನಿರ್ಮಾಣ ಅವಶ್ಯವಾಗಿರುತ್ತದೆ.

ಶಾಲೆಯ ಹಿತೈಷಿಗಳು,ಹಳೆ ವಿಧ್ಯಾರ್ಥಿಗಳು ಸೇರಿಕೊಂಡು ಶಾಲೆಯ ಅಮೃತ ಮಹೋತ್ಸವವನ್ನು ಪ್ರೇರಣಾದಾಯಕವಾಗಿ ನೆರವೇರಿಸಲು ಬಳೆಂಜ ಶಿಕ್ಷಣ ಟ್ರಸ್ಟ್ ರಚಿಸಿ ದಾನಿಗಳ ಸಹಕಾರವನ್ನು ಬಳಸಿಕೊಂಡು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಸರ್ಕಾರದ ಶಿಕ್ಷಣ ಇಲಾಖೆಯ ಮೂಲಕ ತಾವುಗಳು ಶಾಲೆ ಅಭಿವೃದ್ಧಿ ಪಡಿಸಲು ರೂ. 2.00 ಕೋಟಿಗಳ ವಿಶೇಷ ಅನುದಾನ ಮಂಜೂರು ಮಾಡುವಂತೆ ಪತ್ರದ ಮೂಲಕ ತಿಳಿಸಲಾಗಿದೆ.

Related posts

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya
error: Content is protected !!