25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ.
ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ, ಇವರ ಸಂಯುಕ್ತಾಶ್ರಯದಲ್ಲಿ ಸೆ.12 ರಂದು ನಡೆದ
ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯು ಹಲವು ಬಹುಮಾನಗಳನ್ನು ಗೆದ್ದುಕೊಂಡಿದೆ.

ಕಿರಿಯ ಪ್ರಾಥಮಿಕ ವಿಭಾಗ(1 ರಿಂದ 4 ನೇ ತರಗತಿ) ಅಭಿನಯ ಗೀತೆ ಸಾನ್ವಿ ಎಂ.ಕೆ ಪ್ರಥಮ ಬಹುಮಾನ ಗೆದ್ದಿದ್ದಾರೆ.

ಚಿರಾಗ್ ಎಲ್.ಕೆ (ಕಂಠಪಾಠ ಇಂಗ್ಲೀಷ್), ಧ್ರುವ ಹೆಗ್ಡೆ (ಧಾರ್ಮಿಕ ಪಠಣ ಸಂಸ್ಕೃತ), ನಿಶಿಕಾ ವೈ ಪುಜಾರಿ (ಸಂಸ್ಕೃತ
ದೇಶಭಕ್ತಿ ಗೀತೆ), ಸಾನ್ವಿ (ಆಶು ಭಾಷಣ) ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗ(5 ರಿಂದ 7 ನೇ ತರಗತಿ), ಅಚಲ (ಕಂಠಪಾಠ ಇಂಗ್ಲೀಷ್), ಅದ್ವಿತಿ ರಾವ್ (ಧಾರ್ಮಿಕ ಪಠಣ ಸಂಸ್ಕೃತ), ಮಹಮ್ಮದ್ ಅನಾಸ್ (ಧಾರ್ಮಿಕ ಪಠಣ ಅರೇಬಿಕ್), ಅದಿತಿ (ದೇಶಭಕ್ತಿ ಗೀತೆ),ಪ್ರಥಮ ಬಹುಮಾನ ಗೆದ್ದಿದ್ದಾರೆ.

ಹರೀಶ್ ಪಟೇಲ್ ಕಂಠಪಾಠ ಹಿಂದಿ, ವೈಭವ್ ರಾವ್ ಭಕ್ತಿ ಗೀತೆ, ಸಂಹಿತಾ ಅಭಿನಯ ಗೀತೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya
error: Content is protected !!