September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ.
ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ, ಇವರ ಸಂಯುಕ್ತಾಶ್ರಯದಲ್ಲಿ ಸೆ.12 ರಂದು ನಡೆದ
ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯು ಹಲವು ಬಹುಮಾನಗಳನ್ನು ಗೆದ್ದುಕೊಂಡಿದೆ.

ಕಿರಿಯ ಪ್ರಾಥಮಿಕ ವಿಭಾಗ(1 ರಿಂದ 4 ನೇ ತರಗತಿ) ಅಭಿನಯ ಗೀತೆ ಸಾನ್ವಿ ಎಂ.ಕೆ ಪ್ರಥಮ ಬಹುಮಾನ ಗೆದ್ದಿದ್ದಾರೆ.

ಚಿರಾಗ್ ಎಲ್.ಕೆ (ಕಂಠಪಾಠ ಇಂಗ್ಲೀಷ್), ಧ್ರುವ ಹೆಗ್ಡೆ (ಧಾರ್ಮಿಕ ಪಠಣ ಸಂಸ್ಕೃತ), ನಿಶಿಕಾ ವೈ ಪುಜಾರಿ (ಸಂಸ್ಕೃತ
ದೇಶಭಕ್ತಿ ಗೀತೆ), ಸಾನ್ವಿ (ಆಶು ಭಾಷಣ) ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗ(5 ರಿಂದ 7 ನೇ ತರಗತಿ), ಅಚಲ (ಕಂಠಪಾಠ ಇಂಗ್ಲೀಷ್), ಅದ್ವಿತಿ ರಾವ್ (ಧಾರ್ಮಿಕ ಪಠಣ ಸಂಸ್ಕೃತ), ಮಹಮ್ಮದ್ ಅನಾಸ್ (ಧಾರ್ಮಿಕ ಪಠಣ ಅರೇಬಿಕ್), ಅದಿತಿ (ದೇಶಭಕ್ತಿ ಗೀತೆ),ಪ್ರಥಮ ಬಹುಮಾನ ಗೆದ್ದಿದ್ದಾರೆ.

ಹರೀಶ್ ಪಟೇಲ್ ಕಂಠಪಾಠ ಹಿಂದಿ, ವೈಭವ್ ರಾವ್ ಭಕ್ತಿ ಗೀತೆ, ಸಂಹಿತಾ ಅಭಿನಯ ಗೀತೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya
error: Content is protected !!