22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ ನಾಲ್ಕನೇ ದಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೌತಡ್ಕದಲ್ಲಿ ನಾಡಗೀತೆ ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ ಕಾರ್ಯಕ್ರಮವು ಸೆ.12 ರಂದು ಜರುಗಿತು.

ಮುಖ್ಯ ಅತಿಥಿಯಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೌತಡ್ಕದ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜ್ಯೋತಿ ಹೆಬ್ಬಾರ್ ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ವಿಜೇತ ಮಕ್ಕಳಾದ ವಿಸ್ಮಿತ, ಹೃತಿಕ್, ಶಾರ್ವರಿ, ನಿಧಾ ಫಾತಿಮಾ, ಸುಶ್ಮಿತಾ, ದೃತಿ, ಶಶಾಂಕ್, ಹೇಮಂತ್, ಪಿ ಲಾಸ್ಯ, ಹನ್ವಿಶ್, ನಾಡಗೀತೆ ರಾಷ್ಟ್ರಗೀತೆ ಬರವಣಿಗೆಯ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಜೆ ಸಿ ರಾಜಾರಾಮ ಅವರು ಗೀತೆಯನ್ನು ಮಕ್ಕಳಿಗೆ ಹೇಳಿ ಮನರಂಜನೆಗೊಳಿಸಿದರು. ಈ ಸಂದರ್ಭದಲ್ಲಿ ಘಟಕದ ಮಾರ್ಗದರ್ಶಕ ಜೋಸೆಫ್ ಪಿರೇರ, ಜೆಸ್ಸಿಂತ ಡಿಸೋಜ, ನಿಕಟ ಪೂರ್ವ ಅಧ್ಯಕ್ಷರಾದ ಜಿತೇಶ್ ಎಲ್ ಪಿರೇರ, ಯೋಜನೆ ನಿರ್ದೇಶಕರು ಕೆ ಶ್ರೀಧರ್ ರಾವ್, ಶಾಲಾ ಶಿಕ್ಷಕಿಯರಾದ ಶ್ರೀಮತಿ ಕಾಂತಿ , ಪುಷ್ಪ , ಉಪಸ್ಥಿತರಿದ್ದರು.

ಕಾರ್ಯಕ್ರಮದ ಜೆಸಿವಾಣಿ ಧನುಷ್ ಜೈನ್ ವಾಚಿಸಿದರು, ಜೆಸಿಐ ನ ಅಧ್ಯಕ್ಷರು ಸಂತೋಷ್ ಜೈನ್ ಸಾಗತಿಸಿ, ಕಾರ್ಯದರ್ಶಿ ಅಕ್ಷತ್ ರೈ ಧನ್ಯವಾದವಿತ್ತರು.

Related posts

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya
error: Content is protected !!