September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

ಬೆಳ್ತಂಗಡಿ: ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಇದರ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶಿಕ್ಷಣ ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಬಳಂಜ ಶಾಲೆಯು ಪ್ರಾರಂಭವಾಗಿ 75 ವರ್ಷಗಳನ್ನು ಪೂರೈಸುತ್ತಿದ್ದು, ಬಳಂಜ, ನಾಲ್ಕೂರು, ತೆಂಕಕಾರಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಅತೀ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು, 75 ವರ್ಷ ಪೂರೈಸುತ್ತಿರುವ ಈ ಪರ್ವಕಾಲದಲ್ಲಿ ಈ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಹಾಗೂ ಕೊಠಡಿಗಳ ನಿರ್ಮಾಣ ಅವಶ್ಯವಾಗಿರುತ್ತದೆ.

ಶಾಲೆಯ ಹಿತೈಷಿಗಳು,ಹಳೆ ವಿಧ್ಯಾರ್ಥಿಗಳು ಸೇರಿಕೊಂಡು ಶಾಲೆಯ ಅಮೃತ ಮಹೋತ್ಸವವನ್ನು ಪ್ರೇರಣಾದಾಯಕವಾಗಿ ನೆರವೇರಿಸಲು ಬಳೆಂಜ ಶಿಕ್ಷಣ ಟ್ರಸ್ಟ್ ರಚಿಸಿ ದಾನಿಗಳ ಸಹಕಾರವನ್ನು ಬಳಸಿಕೊಂಡು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಸರ್ಕಾರದ ಶಿಕ್ಷಣ ಇಲಾಖೆಯ ಮೂಲಕ ತಾವುಗಳು ಶಾಲೆ ಅಭಿವೃದ್ಧಿ ಪಡಿಸಲು ರೂ. 2.00 ಕೋಟಿಗಳ ವಿಶೇಷ ಅನುದಾನ ಮಂಜೂರು ಮಾಡುವಂತೆ ಪತ್ರದ ಮೂಲಕ ತಿಳಿಸಲಾಗಿದೆ.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಲಾನಯನ ಮಹೋತ್ಸವ ಅಭಿಯಾನ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!