September 6, 2026
ಅಪರಾಧ ಸುದ್ದಿ

ಶಾಲಾ ವಿದ್ಯಾರ್ಥಿನಿಯನ್ನು. ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ : ಜೀವಬೆದರಿಕೆ, ಬಟ್ಟೆ ಹರಿದು ಮಾನಕ್ಕೆ ಕುಂದು ಆರೋಪ ವಿದ್ಯಾರ್ಥಿನಿ ವೇಣೂರು ಪೊಲೀಸ್ ಠಾಣೆಗೆ ದೂರು

ಕುತ್ಲೂರು: ಕಾಲೇಜಿಗೆ ಹೋಗಿ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯನ್ನು ರಸ್ತೆಯ ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ ನಡೆಸಿ, ಬಟ್ಟೆ ಹರಿದು ಹಾಕಿ ಮಾನಹಾನಿ ಮಾಡಿ, ಕೊಲೆ ಬೆದರಿಕೆ ಹಾಕಿರುವ ಆರೋಪದಲ್ಲಿ ವಿದ್ಯಾರ್ಥಿನಿ ನೀಡಿದ ದೂರಿನಂತೆ ವ್ಯಕ್ತಿಯೋರ್ವನ ಮೇಲೆ ಸೆ.13 ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುತ್ಲೂರು ಗ್ರಾಮದ ಮಂಜುಶ್ರೀ ನಗರ ನಿವಾಸಿ ಶಂಕರ ದೇವಾಡಿಗ ಹಲ್ಲೆ ನಡೆಸಿದ ಆರೋಪಿಯಾಗಿದ್ದು, ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು , ಆರೋಪಿಸಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿತ ಶಂಕರ್ ದೇವಾಡಿಗ ಬಾಲ್ಯದಿಂದಲೇ ವಿದ್ಯಾರ್ಥಿನಿಯ ಪರಿಚಯನಾಗಿದ್ದು, ಇತ್ತೀಚೆಗೆ ಪೋನಿನಲ್ಲಿ ಸಲುಗೆಯಿಂದ ಮಾತನಾಡಿಕೊಂಡು ಪರಸ್ಪರ ಚಾಟಿಂಗ್ ನಡೆಸಿ, ಅನ್ಯೋನ್ಯವಾಗಿದ್ದರು. ಈ ವಿಷಯ ವಿದ್ಯಾರ್ಥಿನಿಯ ತಂದೆ ತಾಯಿಗೆ ಗೊತ್ತಾಗಿ, ತಾಯಿ ಆತನೊಡನೆ ಮಾತನಾಡದಂತೆ, ತಾಕೀತು ಮಾಡಿದ್ದರು.
ಕಳೆದ 3 ದಿನದ ಹಿಂದೆ ವಿದ್ಯಾರ್ಥಿನಿ ಆತನ ನಂಬ್ರವನ್ನು ಬ್ಲಾಕ್ ಮಾಡಿದ್ದಳು. ಇದರಿಂದ ದ್ವೇಷಗೊಂಡ ಆತ ಸೆ. 12 ರಂದು ವಿದ್ಯಾರ್ಥಿನಿ ಕಾಲೇಜಿಗೆ ಹೋಗಿ ಸಂಜೆ ಬಸ್ಸಿನಿಂದ ಇಳಿದು ಮನೆಗೆ ಒಬ್ಬಳೇ ನಡೆದುಕೊಂಡು ಬರುವ ಸಮಯ ಕುತ್ಲೂರು ಗ್ರಾಮದ ಬನಶ್ರೀನಗರ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ಆರೋಪಿ, ವಿದ್ಯಾರ್ಥಿನಿಯನ್ನು ತಡೆದು ನಿಲ್ಲಿಸಿ ಮೊಬೈಲನ್ನು ಪಡೆದುಕೊಂಡು ಪರಿಶೀಲಿಸಿ, ನೀನು ಯಾಕೆ ನನ್ನ ಪೋನು ನಂಬ್ರವನ್ನು ಬ್ಲಾಕ್ ಮಾಡಿದ್ದೀಯಾ, ಎಂದು ವಿಚಾರಿಸಿ, ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿದಲ್ಲದೆ ಕಾಲಿನಿಂದ ಹೊಟ್ಟೆಗೆ ತುಳಿದು, ವಿದ್ಯಾರ್ಥಿನಿಯ ಬಟ್ಟೆ ಹರಿದು ಹಾಕಿ, ಮಾನಕ್ಕೆ ಕುಂದುಂಟು ಮಾಡಿದ್ದ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.
ಈ ಸಂದರ್ಭ ನೆರೆಕರೆಯವರು ಬರುವುದನ್ನು ಕಂಡು ಅರೋಪಿ ವಿದ್ಯಾರ್ಥಿನಿಗೆ ಮೊಬೈಲ್ ನೀಡಿ, ಜೀವ ಬೆದರಿಕೆ ಹಾಕಿ ಸ್ಥಳದಿಂದ ಹೋಗಿದ್ದು, ಹಲ್ಲೆಗೊಳಗಾಗಿ ಗಾಯಗೊಂಡ ವಿದ್ಯಾರ್ಥಿನಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಈ ದೂರನ್ನು ನೀಡಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

Related posts

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
error: Content is protected !!