September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.), ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಮತ್ತು ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇವುಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಸೆ.15ರಂದು ಹತ್ಯಡ್ಕ ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ.

ಉದ್ಘಾಟನೆಯನ್ನು ಅರಸಿನಮಕ್ಕಿ ಮಲ್ನಾಡು ವಸ್ತ್ರಾಲಯ ಮಾಲಕರು ಧರ್ಣಪ್ಪ ಗೌಡ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸೇವಾಭಾರತಿ ಕನ್ಯಾಡಿ ಖಜಾಂಚಿ ಸಂಸ್ಥಾಪಕರು, ಸೇವಾಧಾಮ ಕೆ. ವಿನಾಯಕ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಸದಸ್ಯ ರೊ| ಉದಯಶಂಕರ್, ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಉಪಾಧ್ಯಕ್ಷ ರಾಜು. ಕೆ, ಪುತ್ತೂರು ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಮೆಡಿಕಲ್ ಆಫೀಸರ್ ಡಾ| ಕೆ. ಸೀತಾರಾಮ ಭಟ್, ರಕ್ತನಿಧಿ ವಿಭಾಗ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಜಿಲ್ಲಾ ಸಂಯೋಜಕರು ಪ್ರವೀಣ್ ಕುಮಾರ್, ಶ್ರೀದುರ್ಗಾ ಕ್ಲಿನಿಕ್ ಆರಸಿನಮಕ್ಕಿ ಡಾ। ಹರ್ಷಿತ ಸುವಿನ್, ಸುಬ್ರಾಯ ಭಿಡೆ, ಓಣಿ. ಅರಸಿನಮಕ್ಕಿ ಭಾಗವಹಿಸಲಿದ್ದಾರೆ.

Related posts

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಬರೆಂಗಾಯ ಮಹಮ್ಮಾಯಿ-ದೈವರಾಜ ಗುಳಿಗ ದೈವದ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Suddi Udaya
error: Content is protected !!