30.1 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟವು ನಡೆಯಲಿದ್ದು ಸೆ.13 ರಂದು ವಾಣಿ ಕಾಲೇಜಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಮಂಗಳೂರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಉದ್ಘಾಟಿಸಿ ಶುಭಾಹಾರೈಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮಂಗಳೂರು ಸದಸ್ಯ ಶೈಲೇಶ್ ಕುಮಾ‌ರ್, ಉಜಿರೆ ಎಸ್.ಡಿ.ಎಂ ಕಾಲೇಜಿನ ಕನ್ನಡ ಪ್ರಾದ್ಯಾಪಕರು ಡಾ. ದಿವಾ ಕೊಕ್ಕಡ ಉಪಸ್ಥಿತರಿದ್ದರು. ತುಳು ಕಲಿಕಾ ಶಿಕ್ಷಕಿ ಸಂಧ್ಯಾ ಸೇರಿದಂತೆ 55‌ ಮಂದಿ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸಿದರು.

ಸಿಂಚನಾ , ಜಯಶ್ರೀ , ಕೀರ್ತಿ ಪ್ರಾರ್ಥಿಸಿದರು. ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜು, ಪ್ರಾಂಶುಪಾಲರು ಯದುಪತಿ ಗೌಡ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಮೀನಾಕ್ಷಿ ವಂದಿಸಿದರು.

Related posts

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya
error: Content is protected !!