25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ.
ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ, ಇವರ ಸಂಯುಕ್ತಾಶ್ರಯದಲ್ಲಿ ಸೆ.12 ರಂದು ನಡೆದ
ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯು ಹಲವು ಬಹುಮಾನಗಳನ್ನು ಗೆದ್ದುಕೊಂಡಿದೆ.

ಕಿರಿಯ ಪ್ರಾಥಮಿಕ ವಿಭಾಗ(1 ರಿಂದ 4 ನೇ ತರಗತಿ) ಅಭಿನಯ ಗೀತೆ ಸಾನ್ವಿ ಎಂ.ಕೆ ಪ್ರಥಮ ಬಹುಮಾನ ಗೆದ್ದಿದ್ದಾರೆ.

ಚಿರಾಗ್ ಎಲ್.ಕೆ (ಕಂಠಪಾಠ ಇಂಗ್ಲೀಷ್), ಧ್ರುವ ಹೆಗ್ಡೆ (ಧಾರ್ಮಿಕ ಪಠಣ ಸಂಸ್ಕೃತ), ನಿಶಿಕಾ ವೈ ಪುಜಾರಿ (ಸಂಸ್ಕೃತ
ದೇಶಭಕ್ತಿ ಗೀತೆ), ಸಾನ್ವಿ (ಆಶು ಭಾಷಣ) ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗ(5 ರಿಂದ 7 ನೇ ತರಗತಿ), ಅಚಲ (ಕಂಠಪಾಠ ಇಂಗ್ಲೀಷ್), ಅದ್ವಿತಿ ರಾವ್ (ಧಾರ್ಮಿಕ ಪಠಣ ಸಂಸ್ಕೃತ), ಮಹಮ್ಮದ್ ಅನಾಸ್ (ಧಾರ್ಮಿಕ ಪಠಣ ಅರೇಬಿಕ್), ಅದಿತಿ (ದೇಶಭಕ್ತಿ ಗೀತೆ),ಪ್ರಥಮ ಬಹುಮಾನ ಗೆದ್ದಿದ್ದಾರೆ.

ಹರೀಶ್ ಪಟೇಲ್ ಕಂಠಪಾಠ ಹಿಂದಿ, ವೈಭವ್ ರಾವ್ ಭಕ್ತಿ ಗೀತೆ, ಸಂಹಿತಾ ಅಭಿನಯ ಗೀತೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya
error: Content is protected !!