July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ.
ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ, ಇವರ ಸಂಯುಕ್ತಾಶ್ರಯದಲ್ಲಿ ಸೆ.12 ರಂದು ನಡೆದ
ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯು ಹಲವು ಬಹುಮಾನಗಳನ್ನು ಗೆದ್ದುಕೊಂಡಿದೆ.

ಕಿರಿಯ ಪ್ರಾಥಮಿಕ ವಿಭಾಗ(1 ರಿಂದ 4 ನೇ ತರಗತಿ) ಅಭಿನಯ ಗೀತೆ ಸಾನ್ವಿ ಎಂ.ಕೆ ಪ್ರಥಮ ಬಹುಮಾನ ಗೆದ್ದಿದ್ದಾರೆ.

ಚಿರಾಗ್ ಎಲ್.ಕೆ (ಕಂಠಪಾಠ ಇಂಗ್ಲೀಷ್), ಧ್ರುವ ಹೆಗ್ಡೆ (ಧಾರ್ಮಿಕ ಪಠಣ ಸಂಸ್ಕೃತ), ನಿಶಿಕಾ ವೈ ಪುಜಾರಿ (ಸಂಸ್ಕೃತ
ದೇಶಭಕ್ತಿ ಗೀತೆ), ಸಾನ್ವಿ (ಆಶು ಭಾಷಣ) ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗ(5 ರಿಂದ 7 ನೇ ತರಗತಿ), ಅಚಲ (ಕಂಠಪಾಠ ಇಂಗ್ಲೀಷ್), ಅದ್ವಿತಿ ರಾವ್ (ಧಾರ್ಮಿಕ ಪಠಣ ಸಂಸ್ಕೃತ), ಮಹಮ್ಮದ್ ಅನಾಸ್ (ಧಾರ್ಮಿಕ ಪಠಣ ಅರೇಬಿಕ್), ಅದಿತಿ (ದೇಶಭಕ್ತಿ ಗೀತೆ),ಪ್ರಥಮ ಬಹುಮಾನ ಗೆದ್ದಿದ್ದಾರೆ.

ಹರೀಶ್ ಪಟೇಲ್ ಕಂಠಪಾಠ ಹಿಂದಿ, ವೈಭವ್ ರಾವ್ ಭಕ್ತಿ ಗೀತೆ, ಸಂಹಿತಾ ಅಭಿನಯ ಗೀತೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
error: Content is protected !!